ಬೆಂಗಳೂರಿನಲ್ಲಿ ಅತಿ ದೊಡ್ಡ ಪ್ರಮಾಣದ ದರೋಡೆ: ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ 7.11 ಕೋಟಿ ಹಣದೊಂದಿಗೆ ದರೋಡೆಕೋರರು ಪರಾರಿ

ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್‌ ಫೈವರ್‌ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.

ಮಟ ಮಟ ಮಧ್ಯಾಹ್ನವೇ ನಡೆದ ಕಳ್ಳತನ ಕೇಸ್‌ನಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಯಾವುದೇ ಫಲ ಸಿಕ್ಕಿಲ್ಲ.

ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ದರೋಡೆ ನಡೆದಿರುವುದು ಬಹುತೇಕ ಇದೇ ಮೊದಲು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದ ಪ್ರಮುಖ ದರೋಡೆ ಪ್ರಕರಣಗಳ ಸಾಲಿಗೆ ಇದೂ ಕೂಡ ಸೇರಿದೆ. ಬೀದರ್‌, ಮಂಗಳೂರು, ಕಲಬುರಗಿ ಬಳಿಕ ಬೆಂಗಳೂರಿನ ಹೆಸರು ಕೂಡ ದರೋಡೆ ಕೇಸ್‌ ಲಿಸ್ಟ್‌ನಲ್ಲಿ ಸೇರಿದೆ. ಹಿಂದೆಲ್ಲಾ ಸಾಮಾನ್ಯವಾಗಿ ಬಿಹಾರದಲ್ಲಿ ಮಾತ್ರವೇ ಕಾಣುತ್ತಿದ್ದ ಇಂಥ ಕೇಸ್‌ಗಳು ಈಗ ಕರ್ನಾಟಕದಲ್ಲೂ ಶುರುವಾಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲ- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರಗಳಿಗೆ ದಿನ ನಿತ್ಯ ನಡೆಯುತ್ತಿರುವ ಕರ್ಮಕಾಂಡಗಳೇ ಸಾಕ್ಷಿ ಹೇಳುತ್ತಿವೆ. ಅತ್ತ ಹಾವೇರಿಯಲ್ಲಿ ನವಜಾತ ಶಿಶುವಿನ ದುರಂತ ಅರೋಗ್ಯ ಇಲಾಖೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟರ ಮಟ್ಟಿಗೆ ಮರೀಚಿಕೆಯಂತಾಗಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಎಂದೋ ಕಳೆದುಹೋಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿಕೊಳ್ಳಲಾದರೂ ಕೂಡಲೇ ದರೋಡೆಕೋರರನ್ನು ಬಂಧಿಸಬೇಕಾಗಿದೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ ದರೋಡೆಕೋರರು 7 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ನಗರದ ಮಧ್ಯಭಾಗದಲ್ಲಿ, ಹಾಡುಹಗಲೇ ನಡೆದಿರುವ ದರೋಡೆ ಸಹಜವಾಗಿ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿರುವುದು ಮೇಲಿಂದ ಮೇಲೆ ಸಾಬೀತಾಗುತ್ತಲೇ ಇದೆ. ಸರ್ಕಾರ ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಬಂಧಿಸಬೇಕು ಎಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

18 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

21 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

2 days ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

2 days ago