ಬೆಂಗಳೂರಿನಲ್ಲಿ ಅತಿ ದೊಡ್ಡ ಪ್ರಮಾಣದ ದರೋಡೆ: ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ 7.11 ಕೋಟಿ ಹಣದೊಂದಿಗೆ ದರೋಡೆಕೋರರು ಪರಾರಿ

ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್‌ ಫೈವರ್‌ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.

ಮಟ ಮಟ ಮಧ್ಯಾಹ್ನವೇ ನಡೆದ ಕಳ್ಳತನ ಕೇಸ್‌ನಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಯಾವುದೇ ಫಲ ಸಿಕ್ಕಿಲ್ಲ.

ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ದರೋಡೆ ನಡೆದಿರುವುದು ಬಹುತೇಕ ಇದೇ ಮೊದಲು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದ ಪ್ರಮುಖ ದರೋಡೆ ಪ್ರಕರಣಗಳ ಸಾಲಿಗೆ ಇದೂ ಕೂಡ ಸೇರಿದೆ. ಬೀದರ್‌, ಮಂಗಳೂರು, ಕಲಬುರಗಿ ಬಳಿಕ ಬೆಂಗಳೂರಿನ ಹೆಸರು ಕೂಡ ದರೋಡೆ ಕೇಸ್‌ ಲಿಸ್ಟ್‌ನಲ್ಲಿ ಸೇರಿದೆ. ಹಿಂದೆಲ್ಲಾ ಸಾಮಾನ್ಯವಾಗಿ ಬಿಹಾರದಲ್ಲಿ ಮಾತ್ರವೇ ಕಾಣುತ್ತಿದ್ದ ಇಂಥ ಕೇಸ್‌ಗಳು ಈಗ ಕರ್ನಾಟಕದಲ್ಲೂ ಶುರುವಾಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲ- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರಗಳಿಗೆ ದಿನ ನಿತ್ಯ ನಡೆಯುತ್ತಿರುವ ಕರ್ಮಕಾಂಡಗಳೇ ಸಾಕ್ಷಿ ಹೇಳುತ್ತಿವೆ. ಅತ್ತ ಹಾವೇರಿಯಲ್ಲಿ ನವಜಾತ ಶಿಶುವಿನ ದುರಂತ ಅರೋಗ್ಯ ಇಲಾಖೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟರ ಮಟ್ಟಿಗೆ ಮರೀಚಿಕೆಯಂತಾಗಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಎಂದೋ ಕಳೆದುಹೋಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿಕೊಳ್ಳಲಾದರೂ ಕೂಡಲೇ ದರೋಡೆಕೋರರನ್ನು ಬಂಧಿಸಬೇಕಾಗಿದೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ ದರೋಡೆಕೋರರು 7 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ನಗರದ ಮಧ್ಯಭಾಗದಲ್ಲಿ, ಹಾಡುಹಗಲೇ ನಡೆದಿರುವ ದರೋಡೆ ಸಹಜವಾಗಿ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿರುವುದು ಮೇಲಿಂದ ಮೇಲೆ ಸಾಬೀತಾಗುತ್ತಲೇ ಇದೆ. ಸರ್ಕಾರ ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಬಂಧಿಸಬೇಕು ಎಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

7 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

8 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago