ಬೆಂಗಳೂರಿನಲ್ಲಿ ಅತಿ ದೊಡ್ಡ ಪ್ರಮಾಣದ ದರೋಡೆ: ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ 7.11 ಕೋಟಿ ಹಣದೊಂದಿಗೆ ದರೋಡೆಕೋರರು ಪರಾರಿ

ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್‌ ಫೈವರ್‌ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.

ಮಟ ಮಟ ಮಧ್ಯಾಹ್ನವೇ ನಡೆದ ಕಳ್ಳತನ ಕೇಸ್‌ನಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಯಾವುದೇ ಫಲ ಸಿಕ್ಕಿಲ್ಲ.

ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ದರೋಡೆ ನಡೆದಿರುವುದು ಬಹುತೇಕ ಇದೇ ಮೊದಲು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದ ಪ್ರಮುಖ ದರೋಡೆ ಪ್ರಕರಣಗಳ ಸಾಲಿಗೆ ಇದೂ ಕೂಡ ಸೇರಿದೆ. ಬೀದರ್‌, ಮಂಗಳೂರು, ಕಲಬುರಗಿ ಬಳಿಕ ಬೆಂಗಳೂರಿನ ಹೆಸರು ಕೂಡ ದರೋಡೆ ಕೇಸ್‌ ಲಿಸ್ಟ್‌ನಲ್ಲಿ ಸೇರಿದೆ. ಹಿಂದೆಲ್ಲಾ ಸಾಮಾನ್ಯವಾಗಿ ಬಿಹಾರದಲ್ಲಿ ಮಾತ್ರವೇ ಕಾಣುತ್ತಿದ್ದ ಇಂಥ ಕೇಸ್‌ಗಳು ಈಗ ಕರ್ನಾಟಕದಲ್ಲೂ ಶುರುವಾಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲ- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರಗಳಿಗೆ ದಿನ ನಿತ್ಯ ನಡೆಯುತ್ತಿರುವ ಕರ್ಮಕಾಂಡಗಳೇ ಸಾಕ್ಷಿ ಹೇಳುತ್ತಿವೆ. ಅತ್ತ ಹಾವೇರಿಯಲ್ಲಿ ನವಜಾತ ಶಿಶುವಿನ ದುರಂತ ಅರೋಗ್ಯ ಇಲಾಖೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟರ ಮಟ್ಟಿಗೆ ಮರೀಚಿಕೆಯಂತಾಗಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಎಂದೋ ಕಳೆದುಹೋಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿಕೊಳ್ಳಲಾದರೂ ಕೂಡಲೇ ದರೋಡೆಕೋರರನ್ನು ಬಂಧಿಸಬೇಕಾಗಿದೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ ದರೋಡೆಕೋರರು 7 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ನಗರದ ಮಧ್ಯಭಾಗದಲ್ಲಿ, ಹಾಡುಹಗಲೇ ನಡೆದಿರುವ ದರೋಡೆ ಸಹಜವಾಗಿ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿರುವುದು ಮೇಲಿಂದ ಮೇಲೆ ಸಾಬೀತಾಗುತ್ತಲೇ ಇದೆ. ಸರ್ಕಾರ ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಬಂಧಿಸಬೇಕು ಎಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

5 days ago