ಬೆಂಗಳೂರಿನಲ್ಲಿ ಅತಿ ದೊಡ್ಡ ಪ್ರಮಾಣದ ದರೋಡೆ: ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ 7.11 ಕೋಟಿ ಹಣದೊಂದಿಗೆ ದರೋಡೆಕೋರರು ಪರಾರಿ

ಬೆಂಗಳೂರಿನಲ್ಲಿ ಇಂದು ಡೈರಿ ಸರ್ಕಲ್‌ ಫೈವರ್‌ನಂಥ ಪ್ರಮುಖ ಪ್ರದೇಶದಲ್ಲಿ ಹಾಡಹಗಲೇ ಬರೋಬ್ಬರಿ 7.11 ಕೋಟಿ ರೂಪಾಯಿ ಹಣವನ್ನು ಖದೀಮರು ದರೋಡೆ ಮಾಡಿದ್ದಾರೆ.

ಮಟ ಮಟ ಮಧ್ಯಾಹ್ನವೇ ನಡೆದ ಕಳ್ಳತನ ಕೇಸ್‌ನಲ್ಲಿ ಆರೋಪಿಗಳನ್ನು ಬಂಧಿಸಲು ಪೊಲೀಸರು ನಡೆಸುತ್ತಿರುವ ಕಾರ್ಯಾಚರಣೆಗೆ ಯಾವುದೇ ಫಲ ಸಿಕ್ಕಿಲ್ಲ.

ಬೆಂಗಳೂರಿನಲ್ಲಿ ಇಷ್ಟು ದೊಡ್ಡ ಪ್ರಮಾಣದ ದರೋಡೆ ನಡೆದಿರುವುದು ಬಹುತೇಕ ಇದೇ ಮೊದಲು. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ನಡೆದ ಪ್ರಮುಖ ದರೋಡೆ ಪ್ರಕರಣಗಳ ಸಾಲಿಗೆ ಇದೂ ಕೂಡ ಸೇರಿದೆ. ಬೀದರ್‌, ಮಂಗಳೂರು, ಕಲಬುರಗಿ ಬಳಿಕ ಬೆಂಗಳೂರಿನ ಹೆಸರು ಕೂಡ ದರೋಡೆ ಕೇಸ್‌ ಲಿಸ್ಟ್‌ನಲ್ಲಿ ಸೇರಿದೆ. ಹಿಂದೆಲ್ಲಾ ಸಾಮಾನ್ಯವಾಗಿ ಬಿಹಾರದಲ್ಲಿ ಮಾತ್ರವೇ ಕಾಣುತ್ತಿದ್ದ ಇಂಥ ಕೇಸ್‌ಗಳು ಈಗ ಕರ್ನಾಟಕದಲ್ಲೂ ಶುರುವಾಗಿದೆ.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲ- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿ

ಕಾಂಗ್ರೆಸ್ ಸರ್ಕಾರದ ದುರಾಡಳಿತ, ವೈಫಲ್ಯ, ಭ್ರಷ್ಟಾಚಾರಗಳಿಗೆ ದಿನ ನಿತ್ಯ ನಡೆಯುತ್ತಿರುವ ಕರ್ಮಕಾಂಡಗಳೇ ಸಾಕ್ಷಿ ಹೇಳುತ್ತಿವೆ. ಅತ್ತ ಹಾವೇರಿಯಲ್ಲಿ ನವಜಾತ ಶಿಶುವಿನ ದುರಂತ ಅರೋಗ್ಯ ಇಲಾಖೆಯ ಅವ್ಯವಸ್ಥೆಗೆ ಕನ್ನಡಿ ಹಿಡಿದಿದ್ದರೆ, ಈಗ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ನಡೆದಿರುವ ದರೋಡೆ ಪ್ರಕರಣ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎನ್ನುವುದು ಎಷ್ಟರ ಮಟ್ಟಿಗೆ ಮರೀಚಿಕೆಯಂತಾಗಿದೆ ಎನ್ನುವುದಕ್ಕೆ ನಿದರ್ಶನವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ಜನರಿಗೆ ಕಾಂಗ್ರೆಸ್ ಸರ್ಕಾರದ ಮೇಲೆ ನಂಬಿಕೆ ಎಂದೋ ಕಳೆದುಹೋಗಿದೆ. ಗೃಹ ಇಲಾಖೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಹೇಳಿಕೊಳ್ಳಲಾದರೂ ಕೂಡಲೇ ದರೋಡೆಕೋರರನ್ನು ಬಂಧಿಸಬೇಕಾಗಿದೆ ಎಂದು ಗುಡುಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ATM ಕ್ಯಾಶ್ ವ್ಯಾನ್ ಅಡ್ಡಗಟ್ಟಿ ದರೋಡೆಕೋರರು 7 ಕೋಟಿ ರೂ. ಹಣದೊಂದಿಗೆ ಪರಾರಿಯಾಗಿದ್ದಾರೆ. ನಗರದ ಮಧ್ಯಭಾಗದಲ್ಲಿ, ಹಾಡುಹಗಲೇ ನಡೆದಿರುವ ದರೋಡೆ ಸಹಜವಾಗಿ ಜನರಲ್ಲಿ ಭೀತಿಯನ್ನು ಉಂಟುಮಾಡಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ದುಷ್ಕರ್ಮಿಗಳಿಗೆ ಕಾನೂನಿನ ಭಯ ಇಲ್ಲದಂತಾಗಿರುವುದು ಮೇಲಿಂದ ಮೇಲೆ ಸಾಬೀತಾಗುತ್ತಲೇ ಇದೆ. ಸರ್ಕಾರ ಕೂಡಲೇ ದುಷ್ಕರ್ಮಿಗಳನ್ನು ಪತ್ತೆ ಮಾಡಿ, ಬಂಧಿಸಬೇಕು ಎಂದು ಆಗ್ರಹಪೂರ್ವಕವಾಗಿ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ.

Ramesh Babu

Journalist

Recent Posts

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

47 minutes ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

13 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

13 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

14 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

19 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

1 day ago