ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.
ಕರ್ನಾಟಕ ಹಾಕಿ ಅಸೋಸಿಯೇಷನ್ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.
ಹಾಕಿ ಕಪ್ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ.
ಇಂದಿನಿಂದ ಜನವರಿ ೧೨ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ.
ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.
ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್ ಪಿಳ್ಳೈ ವಿತರಿಸಲಿದ್ದಾರೆ.
ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.
ಕ್ಯೂನೆಟ್ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲೂಕಿನ ತಿರುಮಗೊಂಡನಹಳ್ಳಿ ಗ್ರಾಮದ ಮೂಲಕ ಹಾದುಹೋಗುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಸ್ಥನ ರಸ್ತೆಗೆ ಅಡ್ಡಲಾಗಿ ರೈಲು ಹಳಿ ಹಾದುಹೋಗಿದ್ದು,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಉತ್ತೇಜಿಸುವ ಹಾಗು ಸಾರ್ವಜನಿಕ ದಾಖಲೆಗಳನ್ನು ಮುಕ್ತವಾಗಿ ಜನರ ಮುಂದೆ ಇಡುವುದು ಮಾಹಿತಿ…
ಧರ್ಮಸ್ಥಳ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿ, ಧರ್ಮಸ್ಥಳ ವಿಶ್ವದಲ್ಲೇ ಪವಿತ್ರವಾದ ಸ್ಥಳ. ಅವಷೇಶ ಮತ್ತೊಂದು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ…
ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು…
ಬೆಂಗಳೂರು ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಕೇಂದ್ರದಲ್ಲಿ ನಡೆದ ಕರ್ನಾಟಕ ಸೂಫಿಗಳ ಸಾಹಿತ್ಯ ಸಂಸ್ಕೃತಿ ಅನುಸಂಧಾನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ…