ಬೆಂಗಳೂರಿನಲ್ಲಿ ಇಂದಿನಿಂದ 6ನೇ ಆವೃತ್ತಿಯ ಅಂತಾರಾಜ್ಯ ಹಾಕಿ ಕಪ್‌ ಪಂದ್ಯಾವಳಿ ಆರಂಭ

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.

ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.

ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ.
ಇಂದಿನಿಂದ ಜನವರಿ ೧೨ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ.

ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.

ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್‌ ಪಿಳ್ಳೈ ವಿತರಿಸಲಿದ್ದಾರೆ.

ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್‌ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್‌ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.

ಕ್ಯೂನೆಟ್‌ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

6 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

17 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

18 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

19 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

20 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago