ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.
ಕರ್ನಾಟಕ ಹಾಕಿ ಅಸೋಸಿಯೇಷನ್ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.
ಹಾಕಿ ಕಪ್ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ.
ಇಂದಿನಿಂದ ಜನವರಿ ೧೨ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ.
ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.
ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್ ಪಿಳ್ಳೈ ವಿತರಿಸಲಿದ್ದಾರೆ.
ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.
ಕ್ಯೂನೆಟ್ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…