ಬೆಂಗಳೂರಿನಲ್ಲಿ ಇಂದಿನಿಂದ 6ನೇ ಆವೃತ್ತಿಯ ಅಂತಾರಾಜ್ಯ ಹಾಕಿ ಕಪ್‌ ಪಂದ್ಯಾವಳಿ ಆರಂಭ

ಬೆಂಗಳೂರು: ಬಹು ನಿರೀಕ್ಷಿತ 6ನೇ ಆವೃತ್ತಿಯ “ಚೈರೋಸ್ ಭೀಮಯ್ಯ ಹಾಕಿ ಕಪ್ 2025” ಇಂದಿನಿಂದ ಫೀಲ್ಡ್ ಮಾರ್ಷಲ್ ಕೆ.ಎಂ. ಕರಿಯಪ್ಪ ಹಾಕಿ ಅರೆನಾನಲ್ಲಿ ನಡೆಯಲಿದೆ.

ಕರ್ನಾಟಕ ಹಾಕಿ ಅಸೋಸಿಯೇಷನ್‌ ಹಾಗೂ ಕೂರ್ಗ್ ಚಾಲೆಂಜರ್ಸ್ ಚಿಕ್‌ಪೆಟ್ ಅಸೋಸಿಯೇಷನ್ (CCCA) ಸಹಯೋಗದಲ್ಲಿ ಈ ಅಂತರ್‌-ರಾಜ್ಯ ಪಂದ್ಯಾವಳಿ 5-ಎ-ಸೈಡ್ ಮಾದರಿಯಲ್ಲಿ ಭಾರತೀಯ ಹಾಕಿ ಪ್ರದರ್ಶನ ನಡೆಯಲಿದೆ.

ಹಾಕಿ ಕಪ್‌ ಪಂದ್ಯಾವಳಿಯಲ್ಲಿ ಒಟ್ಟು 180 ಆಟಗಾರರನ್ನೊಳಗೊಂಡ ಒಟ್ಟು 20 ತಂಡಗಳು ಭಾಗವಹಿಸಲಿದ್ದಾರೆ.
ಇಂದಿನಿಂದ ಜನವರಿ ೧೨ರವರೆಗೆ ಪಂದ್ಯಾವಳಿ ನಡೆಯಲಿದ್ದು, ಭಾನುವಾರ ವಿಜೇತರನ್ನು ಘೋಷಿಸಲಾಗುತ್ತದೆ.

ಮಾಜಿ ಭಾರತೀಯ ಹಾಕಿ ಆಟಗಾರರಾದ ವಿ.ಆರ್. ರಘುನಾಥ್, ವಿ.ಎಸ್. ವಿನಯ, ಅಮರ್ ಐಯಮ್ಮ, ನಿತಿನ್ ತಿಮ್ಮಯ್ಯ ಮತ್ತು ನಿಕ್ಕಿನ್ ತಿಮ್ಮಯ್ಯ ಅವರು ಸಹ ಭಾಗವಹಿಸಲಿದ್ದಾರೆ.

ಜನವರಿ 12 ರಂದು ನಡೆಯುವ ಅಂತಿಮ ಸುತ್ತು ನಡೆಯಲಿದ್ದು, ಬಳಿಕ ವಿಜೇತ ತಂಡ ಪದ್ಮಶ್ರೀ ಮತ್ತು ಮಾಜಿ ಭಾರತೀಯ ಹಾಕಿ ಆಟಗಾರ ಎಂ.ಪಿ. ಗಣೇಶ್ ಹಾಗೂ ಧನರಾಜ್‌ ಪಿಳ್ಳೈ ವಿತರಿಸಲಿದ್ದಾರೆ.

ಸಂಘಟಕರನ್ನು ಪ್ರತಿನಿಧಿಸಿದ ಸಿಸಿಸಿಎ ಅಧ್ಯಕ್ಷ ಶ್ರೀ ಕೆ.ಡಿ. ಗಣಪತಿ ಮಾತನಾಡಿ, ಜನವರಿ 10 ರಿಂದ 12 ರವರೆಗೆ ಬೆಂಗಳೂರಿನಲ್ಲಿ 5-ಎ-ಸೈಡ್ ಚೇರೋಸ್ ಭೀಮಯ್ಯ ಹಾಕಿ ಕಪ್‌ನ 6 ನೇ ಆವೃತ್ತಿ ಘೋಷಿಸಲಾಗಿದೆ, ಇದಕ್ಕೆ ಕ್ಯೂನೆಟ್‌ ಅವರ ಪ್ರಾಯೋಜಕ್ವ ನೀಡಿದ್ದು, ಸ್ಪರ್ಧೆ ನಡೆಸಲು ಉತ್ಸಾಹ ಹೆಚ್ಚಿದೆ. ಈ ಪಂದ್ಯಾವಳಿಯು ಭಾರತದ ರಾಷ್ಟ್ರೀಯ ಕ್ರೀಡೆಯಾದ ಹಾಕಿಯನ್ನು ಬೆಂಬಲಿಸಲು ಮತ್ತು ಭಾರತದಾದ್ಯಂತದ ಆಟಗಾರರಿಗೆ ಅವರ ಪ್ರತಿಭೆಯನ್ನು ಪ್ರದರ್ಶಿಸಲು ವೇದಿಕೆಯನ್ನು ಒದಗಿಸುವ ನಮ್ಮ ಅಚಲವಾದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ, ಜೊತೆಗೆ ಈ ಅದ್ಭುತ ಕ್ರೀಡೆಯ ಬೆಳವಣಿಗೆ ಮತ್ತು ಗುರುತಿಸುವಿಕೆಯನ್ನು ಉತ್ತೇಜಿಸುತ್ತದೆ.

ಕ್ಯೂನೆಟ್‌ ಇಂಡಿಯಾ ವಲಯದ ಕಾರ್ಪೊರೇಟ್ ಕಮ್ಯುನಿಕೇಷನ್ಸ್ ಮುಖ್ಯಸ್ಥ ನಿಶ್ಚಲ್ ಸಿ ಮಾತನಾಡಿ, ಭಾರತೀಯ ನೆಲದ ದೇಸಿ ಆಟವಾದ ಹಾಕಿ ಆಟವನ್ನು ಬೆಳೆಸುವ ಅಗತ್ಯವಿದೆ. ಹೀಗಾಗಿ ಹಾಕಿ ಆಟಕ್ಕೆ ನಮ್ಮ ಪ್ರಾಯೋಜಿಕ್ವತ ಸದಾ ಇರಲಿದೆ. ಹಾಕಿ ಆಟವನ್ನು ಜಾಗತಿಕವಾಗಿ ಪ್ರಸಿದ್ಧಿ ಆಟವನ್ನಾಗಿ ಮಾಡುವತ್ತ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದರು.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

3 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

13 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

24 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago