‘ಬೆಂಗಳೂರಿನಲ್ಲಿ ಜನಸಂಖ್ಯೆ ವಾರ್ಷಿಕ ಬೆಳವಣಿಗೆ ದರ 3.7%, ವಾಹನ ಸಂಖ್ಯೆ ಬೆಳವಣಿಗೆ ದರ 10% ನಷ್ಟಿದೆ’

ಉದ್ಯೋಗ ಸೃಷ್ಟಿಯಲ್ಲಿ, ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿ ಮುಂಚೂಣಿ ನಗರವಾಗಿರುವ ಬೆಂಗಳೂರು ಪರಿಣಾಮಕಾರಿ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಹೊಂದಿದೆ ಎಂದು ಗೃಹ ಸಚಿವ ಪ್ರಿಯಡಂಕ್ ಖರ್ಗೆ ಹೇಳಿದ್ದಾರೆ.

ಬೆಂಗಳೂರು ಸಂಚಾರ ಪೊಲೀಸ್ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ ಬೆಂಗಳೂರಿನ ಟ್ರಾಫಿಕ್ ವ್ಯವಸ್ಥೆಯ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಮಾತನಾಡಿದ ಅವರು, ನಾಲ್ಕು ವಿಭಾಗಗಳಲ್ಲಿ ಕಾರ್ಯಾಚರಿಸುತ್ತಿರುವ ಬೆಂಗಳೂರು ಟ್ರಾಫಿಕ್ ಪೊಲೀಸ್ 53 ಪೊಲೀಸ್ ಠಾಣೆಯನ್ನು ಹೊಂದಿದೆ. ಸುಮಾರು 1.25 ಕೋಟಿ ನೋಂದಾಯಿತ ವಾಹನಗಳಿರುವ ಬೆಂಗಳೂರು ನಗರದಲ್ಲಿ ಟ್ರಾಫಿಕ್ ಪೊಲೀಸ್ ವ್ಯವಸ್ಥೆಯು ಅಂದಾಜು 14,000 ಕಿಲೋಮೀಟರ್ ರಸ್ತೆ ಜಾಲದ ಟ್ರಾಫಿಕ್ ನಿರ್ವಹಿಸಬೇಕಾಗುತ್ತದೆ ಎಂದರು.

ಬೆಂಗಳೂರಿನಲ್ಲಿ ಜನಸಂಖ್ಯೆಯ ವಾರ್ಷಿಕ ಬೆಳವಣಿಗೆ ದರ 3.7% ನಷ್ಟಿದ್ದರೆ, ವಾಹನಸಂಖ್ಯೆಯ ಬೆಳವಣಿಗೆ ದರ 10%ನಷ್ಟಿದೆ. ಆಧುನಿಕ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ಪರಿಣಾಮಕಾರಿಯಾಗಿ ಟ್ರಾಫಿಕ್ ನಿರ್ವಹಣೆ ಮಾಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

ಸಂಚಾರ ಸುರಕ್ಷತೆ, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ ಮತ್ತು ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು ನೀಡುವ ಕುರಿತು ಕಾರ್ಯಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಸಂಚಾರ ಪೊಲೀಸ್‌ ವಸ್ತು ಸಂಗ್ರಹಾಲಯ ಹಾಗೂ ಕ್ಯಾಮೆರಾ ಟ್ರ್ಯಾಕಿಂಗ್‌ ವಿಭಾಗಕ್ಕೆ ಭೇಟಿ ನೀಡಿ ಕಾರ್ಯಾಚರಣೆಯನ್ನು ವೀಕ್ಷಿಸಿದೆ. ಮುಂದಿನ ದಿನಗಳಲ್ಲಿ ಬೆಂಗಳೂರು ಟ್ರಾಫಿಕ್ ವ್ಯವಸ್ಥೆಯನ್ನು ಇನ್ನಷ್ಟು ಸುಧಾರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.

Ramesh Babu

Journalist

Recent Posts

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

57 minutes ago

ಬಸ್ ಏರಿದ್ರೆ ಗಮ್ಯಸ್ಥಾನ ಸೇರುತ್ತೇವೆ ಅನ್ನೋ ಗ್ಯಾರಂಟಿ ಇಲ್ಲ!: ಗುಂಡಮ್ಮಗೆರೆ–ಹೊಸಹಳ್ಳಿ ಮಾರ್ಗದಲ್ಲಿ ಪದೇ ಪದೇ ಕೆಟ್ಟು ನಿಲ್ಲುವ ಸಾರಿಗೆ ಬಸ್‌ಗಳು

ದೊಡ್ಡಬಳ್ಳಾಪುರ: ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಸಂಚರಿಸುವ ಸಾರಿಗೆ ಬಸ್‌ಗಳು ಪದೇ ಪದೇ ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುತ್ತಿರುವುದರಿಂದ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.…

1 hour ago

ಕೃಷ್ಣ ಜನ್ಮಾಷ್ಟಮಿಯ ನೆಪದಲ್ಲಿ ಒಂದಷ್ಟು ಚಿಂತನೆ……

ಭಾರತದ ನೆಲದಲ್ಲಿ, ತಮ್ಮ ವ್ಯಕ್ತಿತ್ವದ ರೂಪದಲ್ಲಿ ಅತ್ಯಂತ ಹೆಚ್ಚು ಪರಿಣಾಮ ಬೀರಿದ ನಾಲ್ಕು ಪಾತ್ರಗಳೆಂದರೆ ಕೃಷ್ಣ, ರಾಮ, ಗಾಂಧಿ, ಮತ್ತು…

4 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ ರಾಜಶೇಖರ್ ಆಚಾರ್

  ಚಿಕ್ಕನಾಯಕನಹಳ್ಳಿ: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ : ಕಾರ್ಯದರ್ಶಿ ಹೇಮಂತ್

  ಚಿಕ್ಕನಾಯಕನಹಳ್ಳಿ: ರೈತರ ವಿಕಸನಕ್ಕೆಂದೇ ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

14 hours ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ‘ಕೇರ್ ಬೈ ಬಿಎಲ್‌ಆರ್’ ವೈಯಕ್ತಿಕ ಪ್ರಯಾಣಿಕ ಸೇವೆ ಆರಂಭ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ಅನುಭವವನ್ನು ಇನ್ನಷ್ಟು ಸುಗಮ, ಅನುಕೂಲಕರ ಮತ್ತು ವೈಯಕ್ತಿಕ ಅಗತ್ಯಗಳಿಗೆ ಹೊಂದುವಂತೆ…

17 hours ago