ಬೆಂಗಳೂರಿನಿಂದ‌ ದೆಹಲಿಗೆ ಸಚಿವರ ಪಟ್ಟಿ ತೆಗೆದುಕೊಂಡು ಹೋದ್ರಾ ಡಿ.ಕೆ ಶಿವಕುಮಾರ್..?

ದೇವನಹಳ್ಳಿ:- ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಕ್ಕೂ ಮುನ್ನ ಡಿಕೆ ಶಿವಕುಮಾರ್ ಕಾರಿನಲ್ಲಿಯೇ ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿರುವ ದೃಶ್ಯಗಳು ಗಮನ ಸೆಳೆದವು.

ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವುಗಳನ್ನು ತಮ್ಮ ಆಪ್ತರ ಕೈಗೆ ನೀಡಿದ ದೃಶ್ಯವೂ ಕಂಡುಬಂದಿದೆ.

ಇದರಿಂದಾಗಿ ನೂತನ ಸಚಿವ ಸಂಪುಟಕ್ಕೆ ಸಂಬಂಧಿಸಿದ ಪಟ್ಟಿಯನ್ನೇ ಡಿಕೆಶಿ ದೆಹಲಿಗೆ ಕೊಂಡೊಯ್ದರಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಹೈಕಮಾಂಡ್ ಒಪ್ಪಿಗೆ ಪಡೆಯಲು ಸಚಿವರ ಪಟ್ಟಿ ಸಿದ್ಧಪಡಿಸಿರುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಹಾಗೂ ಸಂಪುಟ ಪುನರ್‌ರಚನೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ದೇವನಹಳ್ಳಿಯಿಂದ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿರುವ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರ ಜೊತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Ramesh Babu

Journalist

Recent Posts

ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ಮೂವರು ದುರ್ಮರಣ, ಮತ್ತೊಂದು ಮಗುವಿಗೆ ಗಂಭೀರ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಶುಕ್ರವಾರ ಸಂಜೆ ಸುಮಾರು 6:15ಕ್ಕೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

14 hours ago

ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯ ಭೀಕರ ಕೊಲೆ

ಚಿಕ್ಕಬಳ್ಳಾಪುರ: ಬಂಗಾರದ ಕಿವಿ ಓಲೆಗಳಿಗಾಗಿ 80 ವರ್ಷದ ವೃದ್ಧೆಯನ್ನು ಹತ್ಯೆ ಮಾಡಿ, ಕಿವಿಗಳನ್ನು ಕತ್ತರಿಸಿ ಆಭರಣ ಕಳವು ಮಾಡಿರುವ ಅಮಾನುಷ…

15 hours ago

ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿ ಗಾಂಜಾ ಮಾರಾಟ: ಇಬ್ಬರ ಬಂಧನ, 3.61 ಕೆಜಿ ಗಾಂಜಾ ವಶ

ದೇವನಹಳ್ಳಿ: ಹೊರ ರಾಜ್ಯದ ಕಾರ್ಮಿಕರನ್ನು ಗುರಿಯಾಗಿಸಿಕೊಂಡು ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ಇಬ್ಬರನ್ನು ಚನ್ನರಾಯಪಟ್ಟಣ ಪೊಲೀಸರು ಬಂಧಿಸಿ, ಅವರಿಂದ 3…

16 hours ago

ನೇಕಾರ ಸಮ್ಮಾನ್ ಯೋಜನೆಯಡಿ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2026-27ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯಡಿ ಜಿಲ್ಲೆಯಲ್ಲಿರುವ ಪ್ರತಿ ಕೈಮಗ್ಗ, ವಿದ್ಯುತ್…

17 hours ago

ಗಂಧದ ಮರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ: ₹30 ಲಕ್ಷಕ್ಕೂ ಅಧಿಕ ಮೌಲ್ಯದ 254 ಕೆಜಿ ತೂಕದ ಗಂಧದ ತುಂಡುಗಳ ವಶ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ನಡೆದಿದ್ದ ಗಂಧದ ಮರ ಕಳ್ಳತನ ಪ್ರಕರಣವನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

19 hours ago

ಅಂತಾರಾಜ್ಯ ಮನೆಗಳ್ಳರ ಬಂಧನ: ₹11.42 ಲಕ್ಷ ಮೌಲ್ಯದ ಕಳವು ಮಾಲು ವಶ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ, ಬಿಹಾರ ಮೂಲದ…

1 day ago