ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.
ಬಿಎಂಆರ್ಸಿಎಲ್ ಹಾಗೂ ಅನ್ಬಾಕ್ಸಿಂಗ್ ಬಿಎಲ್ಆರ್ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.
*ಎಲ್ಲೆಲ್ಲಿ ಚಿತ್ರ:*
ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜ್ ಮೆಟ್ರೋ ಸ್ಟೇಷನ್ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್ಕುಮಾರ್ ಸುಂದರವಾಗಿ ಚಿತ್ರಬಿಡಿಸಿದ್ದಾರೆ.
ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್ಗಳು ಮತ್ತು ಮ್ಯಾಚ್ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…