ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕತೆ ಹೇಳುತ್ತಿರುವ ರಂಗುರಂಗಿನ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

*ಎಲ್ಲೆಲ್ಲಿ ಚಿತ್ರ:*

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

Ramesh Babu

Journalist

Recent Posts

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

4 hours ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

1 day ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

3 days ago