ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕತೆ ಹೇಳುತ್ತಿರುವ ರಂಗುರಂಗಿನ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

*ಎಲ್ಲೆಲ್ಲಿ ಚಿತ್ರ:*

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

Ramesh Babu

Journalist

Recent Posts

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

37 minutes ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

10 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

21 hours ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

2 days ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

2 days ago