ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕತೆ ಹೇಳುತ್ತಿರುವ ರಂಗುರಂಗಿನ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

*ಎಲ್ಲೆಲ್ಲಿ ಚಿತ್ರ:*

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

Ramesh Babu

Journalist

Recent Posts

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

17 hours ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

2 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

2 days ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

2 days ago