ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕತೆ ಹೇಳುತ್ತಿರುವ ರಂಗುರಂಗಿನ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

*ಎಲ್ಲೆಲ್ಲಿ ಚಿತ್ರ:*

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

Ramesh Babu

Journalist

Recent Posts

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

7 hours ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

9 hours ago

ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ…

9 hours ago

ಒಳಮೀಸಲಾತಿ ಜಾರಿ ಸ್ವಾಗತಾರ್ಹ, ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ- ಕರ್ನಾಟಕ ಮಾದಾರ ಮಹಾಸಭಾ ಬೆಂ.ಗ್ರಾ ಜಿಲ್ಲಾಧ್ಯಕ್ಷ ಸುಬ್ಬರಾಜು

ದೊಡ್ಡಬಳ್ಳಾಪುರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ…

9 hours ago

Rain Update: ಬೆಂ ಗ್ರಾ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್

ಇಂದು ಸಂಜೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಜಿಲ್ಲಾ ವಿಪತ್ತು…

12 hours ago

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಸಾವು: ಪ್ರೀವೆಡ್ಡಿಂಗ್ ಶೂಟ್ ಗೆ ವಧು ಕರೆತರಲು ತೆರಳಿದ್ದ ವೇಳೆ ಘಟನೆ

ಹಸೆಮಣೆ ಏರಬೇಕಿದ್ದ ವರ ಅಪಘಾತದಲ್ಲಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದ ಬಳಿ ಇಂದು…

15 hours ago