ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕತೆ ಹೇಳುತ್ತಿರುವ ರಂಗುರಂಗಿನ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.

ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.

*ಎಲ್ಲೆಲ್ಲಿ ಚಿತ್ರ:*

ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್‌ಕುಮಾರ್‌ ಸುಂದರವಾಗಿ ಚಿತ್ರಬಿಡಿಸಿದ್ದಾರೆ.

ಚರ್ಚ್‌ಸ್ಟ್ರೀಟ್‌ ನಲ್ಲಿರುವ ಗೋಡೆ ಒಂದರ ಮೇಲೆ, ಬಿಡುವಿನ ಸಮಯದಲ್ಲಿ ನಿಮ್ಮೊಂದಿಗೆ ಕಳೆಯಿರಿ ಎಂಬ ಸಂದೇಶ ಸಾರುವ ಚಿತ್ರವನ್ನು ಮನಸೋರೆಗೊಳ್ಳುವಂತೆ ಕಲಾವಿದರಾದ ಅನ್ಪು ವರ್ಕಿ ಅವರು ತಮ್ಮ ಕೈಚಳಕ ತೋರಿಸಿದ್ದಾರೆ. ಇನ್ನು, ಬೆಂಗಳೂರಿನ ವಲಸೆ ಬರುವ ಸಾವಿರಾರು ಜನ ಇಲ್ಲಿ ಬದುಕಲು ನಡೆಸುವ ಜಿದ್ದಾಜಿದ್ದಿನ ಕಷ್ಟವನ್ನು ವಿವರಿಸುವಂತೆ ಒಬ್ಬ ವ್ಯಕ್ತಿ ಸಿಲೆಂಡರ್‌ ಮೇಲೆ ಮಲಗಿರುವ ಚಿತ್ರದ ಮೂಲಕ ಹೇಳಲಾಗಿದೆ. ಜೆ.ಪಿ.ನಗರದ ಮೆಟ್ರೋ ನಿಲ್ದಾಣದಲಿ ವಿಂಡೋಸ್ ಟು ದಿ ಸೋಲ್ ಶೀರ್ಷಿಕೆಯಲ್ಲಿ ಚಿತ್ರ ಬಿಡಿಸಲಾಗಿದ್ದು, ಮಹಿಳೆಯೊಬ್ಬರ ಕಣ್ಣುಗಳ ಚಿತ್ರ ಇದಾಗಿದೆ.

ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್‌ಗಳು ಮತ್ತು ಮ್ಯಾಚ್‌ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್‌ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್‌ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್‌ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.

Ramesh Babu

Journalist

Recent Posts

‘ಶಿಕ್ಷಕರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಶಿಲ್ಪಿಗಳು’

ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…

13 hours ago

ಬೆಸ್ಕಾಂ ವಿರುದ್ಧ ಒಣ ಮೆಣಸಿನಕಾಯಿ ಹೊಗೆ ಹೋರಾಟಕ್ಕೆ ರೈತರ ನಿರ್ಧಾರ

ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…

14 hours ago

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

20 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

1 day ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

1 day ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

1 day ago