ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.
ಬಿಎಂಆರ್ಸಿಎಲ್ ಹಾಗೂ ಅನ್ಬಾಕ್ಸಿಂಗ್ ಬಿಎಲ್ಆರ್ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ.
*ಎಲ್ಲೆಲ್ಲಿ ಚಿತ್ರ:*
ವಿಶ್ವೇಶ್ವರಯ್ಯ ಸೆಂಟ್ರಲ್ ಕಾಲೇಜ್ ಮೆಟ್ರೋ ಸ್ಟೇಷನ್ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ ಬಗ್ಗೆ ಕಲಾವಿದರಾದ ಅನಿಲ್ಕುಮಾರ್ ಸುಂದರವಾಗಿ ಚಿತ್ರಬಿಡಿಸಿದ್ದಾರೆ.
ಜಯನಗರ ಮೆಟ್ರೋ ನಿಲ್ದಾಣದ ಗೋಡೆ ಮೇಲೆ ಈ ಹಿಂದೆ ಇದ್ದ ಬೆಂಗಳೂರಿನ ನೈಜತೆಯ ಬಗ್ಗೆ ಚಿತ್ರಿಸಲಾಗಿದೆ, ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಲ್ಲಿ ಹಳೆಯ ವಿಂಟೇಜ್ ಪೋಸ್ಟರ್ಗಳು ಮತ್ತು ಮ್ಯಾಚ್ಬಾಕ್ಸ್ ಚಿತ್ರಗಳಿಂದ ಪ್ರೇರಿತವಾದ ಕಲಾಕೃತಿಯನ್ನು ಬಿಡಿಸಲಾಗಿದೆ. ಸೈನ್ಸ್ ಗ್ಯಾಲರಿ ರಸ್ತೆಯ ಗೋಡೆಗಳ ಮೇಲೆ ರಂಗೋಲಿ ಚಿತ್ತಾರ, ಯಶವಂತಪುರ ಮೆಟ್ರೋಸ್ಟೇಷನ್ನಲ್ಲಿ ದೇಹದ ಭಾಗಗಳ ಕುರಿತು ವಿವರಿಸುವ ಚಿತ್ರ, ಹಲಸೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಯೊಬ್ಬರು ತಳ್ಳೋಗಾಡಿ ತಳ್ಳುವ ಸಾಗುವ ಚಿತ್ರವನ್ನು ಬಿಡಿಸಲಾಗಿದೆ. ಒಟ್ಟಾರೆ 10 ಗೋಡೆಗಳ ಮೇಲೆ ವಿವಿಧ ವಿಷಯಗಳನ್ನಾಧರಿಸಿ, ಬೃಹತ್ ಗಾತ್ರದಲ್ಲಿ ಚಿತ್ರ ಬಿಡಿಸಿದ್ದು, ಈ ಚಿತ್ರಗಳು ನಗರದ ಸೌಂದರ್ಯವನ್ನು ಇನ್ನಷ್ಟು ಹೆಚ್ಚಿಸಿವೆ.
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…