ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು- ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು

ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು.  ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳು ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ‌ ನಡೆದ ಆಧುನಿಕ‌ ಆದಿಮ‌ ಪುಸ್ತಕ ಬಿಡುಗಡೆ ‌ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮೂರಿನ ಕೆರೆಗಳಿಗೆ ವಿದೇಶದ ಪಕ್ಷಿಗಳು ಪ್ರತಿ ವರ್ಷ  ಬರುತ್ತವೆ. ಕೆರೆಗಳು‌ ಕಲುಷಿತಗೊಂಡರೆ ವಿದೇಶದಿಂದ ಬರುವ ಪಕ್ಷಿಗಳಿಗೆ ನೆಲೆ ಇಲ್ಲದಂತೆ ಆಗುತ್ತದೆ. ಕೆರೆಗಳನ್ನು ಆಶ್ರಯಿಸಿಕೊಂಡಿರುವ ಜಲಚರಗಳು ನಾಶವಾಗುತ್ತವೆ. ಅಂತರ್ಜಲ ಕಲುಷಿತವಾಗುತ್ತದೆ. ರೋಗ ಹರಡುವ ಈ ತ್ಯಾಜ್ಯ ನೀರು ಜನರನ್ನು ಹಳ್ಳಿಗಳಿಂದ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದರು.

ಭಾರತದ ದೇಶದಲ್ಲಿ ಸ್ವಾತಂತ್ರ್ಯ ಮತ್ತು ಮಹಾತ್ಮಗಾಂಧಿ  ಮುಂತಾದವರಿಂದ ತಳಸಮುದಾಯವರು ಶಿಕ್ಷಣ ಪಡೆಯುವಂತಾದರು. ಶಿಕ್ಷಣದಿಂದ ವಿವಿಧ ವರ್ಗಗಳ ಜನರು ಸಮಾಜದ ಮುಖ್ಯವಾಹಿನಿಯಲ್ಲಿ ಬರಲು‌ ಸಾಧ್ಯವಾಯಿತು. ಇಂದು ಎಲ್ಲರೂ ಧರ್ಮದ ಬಗ್ಗೆ  ಮಾತನಾಡುತ್ತಾ ಪರಸ್ಪರ ಧರ್ಮಗಳನ್ನು ದ್ವೇಷಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಸತ್ಯದ ವಿಷಯಗಳನ್ನು ಪ್ರತಿಪಾದಿಸಲು ಹಿಂಜರಿಕೆಪಡುವ ಅಗತ್ಯವಿಲ್ಲ ಎಂದರು.

ಆಧುನಿಕ ಆದಿಮ ಕೃತಿ ಬಿಡುಗಡೆ ಮಾಡಿ ಮಾತನಾಡಿದ  ನಿವೃತ್ತ ಪ್ರಾಧ್ಯಾಪಕ ಡಾ.ಚಿಕ್ಕಣ್ಣಯಣಿಕಟ್ಟಿ,  ಆಧುನಿಕ ಆದಿಮ ಕೃತಿಯೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ಜಾನಪದೀಯ ನೆಲೆಯಲ್ಲಿ ವಿವೇಚಿಸುವ ಮೂಲಕ   ಕರ್ನಾಟಕವನ್ನು ಅಕ್ಷರ ಸಂಸ್ಕೃತಿಯ ಮೂಲಕ ದಾಖಲೀಕರಣ ಮಾಡಲಾಗಿದೆ.

ಸಾಂಸ್ಕೃತಿಕ ನೆಲೆಗಳಲ್ಲಿ ವಿವಿಧ ರೀತಿಯ ಆಲೋಚನೆಗಳನ್ನು ಆಧುನಿಕ ಆದಿಮ ಕೃತಿ ವಿವರಿಸುತ್ತದೆ. ಪ್ರತಿ ಗ್ರಾಮಗಳು ಸಾಂಸ್ಕೃತಿಕ ಅಧ್ಯಯನಕ್ಕೆ ಒಳಗಾಗಬೇಕು. ಆಧುನಿಕ  ಆದಿಮ ಪುಸ್ತಕವನ್ನು ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವುದು ಪುಸ್ತಕದ ಮಹತ್ವವನ್ನು ಹೇಳುತ್ತದೆ. ದಕ್ಷಿಣ ಭಾರತದಲ್ಲೇ ಮೈಸೂರು ವಿಶ್ವವಿದ್ಯಾನಿಲಯದಂತಹ ವಿಶ್ವವಿದ್ಯಾಲಯ ಮತ್ತೊಂದಿಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕು ಹಲವಾರು ಪ್ರತಿಭಾವಂತರನ್ನು ಹೊಂದಿದೆ. ಕಲೆ, ಸಾಹಿತ್ಯ, ರಂಗಭೂಮಿ, ಸ್ವಾತಂತ್ರ್ಯ ಹೋರಾಟ ಮುಂತಾದ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಭಾವಂತರು ಮುಂದಿದ್ದಾರೆ. ಅವರ ಸಾಧನೆಯನ್ನು ಸ್ಮರಿಸುವ ಮತ್ತು ಪರಿಚಯಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಜನಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುವ ಮೂಲಕ‌ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತು  ನಡೆಸಲಾಗುತ್ತಿದೆ. ಆಜೀವ ಸದಸ್ಯತ್ವ ಅಭಿಯಾನ ಮೂಲಕ‌ ಕನ್ನಡ ಸಾಹಿತ್ಯ ಪರಿಷತ್ತು ಕೋಟಿ ಸದಸ್ಯರನ್ನು‌  ಹೊಂದಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿಪತಯ್ಯ, ಭಜನಾ ಮಂಡಲಿ ಅಧ್ಯಕ್ಷ ನಂಜೇಗೌಡ,  ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಅಶ್ವತ್ಥಗೌಡ, ಸಂಘಟನಾ ಕಾರ್ಯದರ್ಶ ರಾಜಘಟ್ಟ ರವಿ, ವಿನೋದಗೌಡ,  ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ  ಪಿ.ಗೋವಿಂದರಾಜು, ಮಧುರೆ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್, ಶಿಕ್ಷಕರ‌ ಸಂಘದ ಮಾಜಿ ಅಧ್ಯಕ್ಷ ಶಂಕರಪ್ಪ, ಭಾರತ ಸೇವಾದಳದ ಕೆಂಪೇಗೌಡ, ಸೇವಾ ಸಮಿತಿ ಅಧ್ಯಕ್ಷ ಮರಿಯಣ್ಣ, ಕಸಾಪ ಪದಾಧಿಕಾರಿಗಳಾದ ಶರಣಯ್ಯ ಹಿರೇಮಠ, ಪರಮೇಶ್, ಗಿರೀಶ್.ಎನ್.ಬರಗೂರು, ಜಿ.ಸುರೇಶ್, ಹೊಂಗಿರಣ    ಬಳಗದ ಅಧ್ಯಕ್ಷ  ಸಿ.ಗೋವಿಂದರಾಜು, ಟಿ.ಸಿ.ವೆಂಕಟಾಚಲಪತಿ, ಮುದ್ದುಗಂಗಯ್ಯ, ಚಂದ್ರಶೇಖರ್, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ  ಬೀರೇಶ್, ನೆಲಮಂಗಲ ಕಸಾಪ ಅಧ್ಯಕ್ಷ ಪ್ರದೀಪಕುಮಾರ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

13 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago