ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು- ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು

ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು.  ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳು ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ‌ ನಡೆದ ಆಧುನಿಕ‌ ಆದಿಮ‌ ಪುಸ್ತಕ ಬಿಡುಗಡೆ ‌ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ಧತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮೂರಿನ ಕೆರೆಗಳಿಗೆ ವಿದೇಶದ ಪಕ್ಷಿಗಳು ಪ್ರತಿ ವರ್ಷ  ಬರುತ್ತವೆ. ಕೆರೆಗಳು‌ ಕಲುಷಿತಗೊಂಡರೆ ವಿದೇಶದಿಂದ ಬರುವ ಪಕ್ಷಿಗಳಿಗೆ ನೆಲೆ ಇಲ್ಲದಂತೆ ಆಗುತ್ತದೆ. ಕೆರೆಗಳನ್ನು ಆಶ್ರಯಿಸಿಕೊಂಡಿರುವ ಜಲಚರಗಳು ನಾಶವಾಗುತ್ತವೆ. ಅಂತರ್ಜಲ ಕಲುಷಿತವಾಗುತ್ತದೆ. ರೋಗ ಹರಡುವ ಈ ತ್ಯಾಜ್ಯ ನೀರು ಜನರನ್ನು ಹಳ್ಳಿಗಳಿಂದ ಗೂಳೆ ಹೋಗುವ ಪರಿಸ್ಥಿತಿ ನಿರ್ಮಾಣ ಆಗುತ್ತದೆ ಎಂದರು.

ಭಾರತದ ದೇಶದಲ್ಲಿ ಸ್ವಾತಂತ್ರ್ಯ ಮತ್ತು ಮಹಾತ್ಮಗಾಂಧಿ  ಮುಂತಾದವರಿಂದ ತಳಸಮುದಾಯವರು ಶಿಕ್ಷಣ ಪಡೆಯುವಂತಾದರು. ಶಿಕ್ಷಣದಿಂದ ವಿವಿಧ ವರ್ಗಗಳ ಜನರು ಸಮಾಜದ ಮುಖ್ಯವಾಹಿನಿಯಲ್ಲಿ ಬರಲು‌ ಸಾಧ್ಯವಾಯಿತು. ಇಂದು ಎಲ್ಲರೂ ಧರ್ಮದ ಬಗ್ಗೆ  ಮಾತನಾಡುತ್ತಾ ಪರಸ್ಪರ ಧರ್ಮಗಳನ್ನು ದ್ವೇಷಿಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ. ಸತ್ಯದ ವಿಷಯಗಳನ್ನು ಪ್ರತಿಪಾದಿಸಲು ಹಿಂಜರಿಕೆಪಡುವ ಅಗತ್ಯವಿಲ್ಲ ಎಂದರು.

ಆಧುನಿಕ ಆದಿಮ ಕೃತಿ ಬಿಡುಗಡೆ ಮಾಡಿ ಮಾತನಾಡಿದ  ನಿವೃತ್ತ ಪ್ರಾಧ್ಯಾಪಕ ಡಾ.ಚಿಕ್ಕಣ್ಣಯಣಿಕಟ್ಟಿ,  ಆಧುನಿಕ ಆದಿಮ ಕೃತಿಯೂ ಸಾಮಾಜಿಕ, ಸಾಂಸ್ಕೃತಿಕ ಮತ್ತು ಜಾನಪದೀಯ ನೆಲೆಯಲ್ಲಿ ವಿವೇಚಿಸುವ ಮೂಲಕ   ಕರ್ನಾಟಕವನ್ನು ಅಕ್ಷರ ಸಂಸ್ಕೃತಿಯ ಮೂಲಕ ದಾಖಲೀಕರಣ ಮಾಡಲಾಗಿದೆ.

ಸಾಂಸ್ಕೃತಿಕ ನೆಲೆಗಳಲ್ಲಿ ವಿವಿಧ ರೀತಿಯ ಆಲೋಚನೆಗಳನ್ನು ಆಧುನಿಕ ಆದಿಮ ಕೃತಿ ವಿವರಿಸುತ್ತದೆ. ಪ್ರತಿ ಗ್ರಾಮಗಳು ಸಾಂಸ್ಕೃತಿಕ ಅಧ್ಯಯನಕ್ಕೆ ಒಳಗಾಗಬೇಕು. ಆಧುನಿಕ  ಆದಿಮ ಪುಸ್ತಕವನ್ನು ಮೈಸೂರು ವಿಶ್ವವಿದ್ಯಾನಿಲಯ ಪ್ರಕಟಿಸಿರುವುದು ಪುಸ್ತಕದ ಮಹತ್ವವನ್ನು ಹೇಳುತ್ತದೆ. ದಕ್ಷಿಣ ಭಾರತದಲ್ಲೇ ಮೈಸೂರು ವಿಶ್ವವಿದ್ಯಾನಿಲಯದಂತಹ ವಿಶ್ವವಿದ್ಯಾಲಯ ಮತ್ತೊಂದಿಲ್ಲ ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪ್ರೊ.ಬಿ.ಎನ್.ಕೃಷ್ಣಪ್ಪ ಮಾತನಾಡಿ,  ದೊಡ್ಡಬಳ್ಳಾಪುರ ತಾಲ್ಲೂಕು ಹಲವಾರು ಪ್ರತಿಭಾವಂತರನ್ನು ಹೊಂದಿದೆ. ಕಲೆ, ಸಾಹಿತ್ಯ, ರಂಗಭೂಮಿ, ಸ್ವಾತಂತ್ರ್ಯ ಹೋರಾಟ ಮುಂತಾದ ಕ್ಷೇತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರತಿಭಾವಂತರು ಮುಂದಿದ್ದಾರೆ. ಅವರ ಸಾಧನೆಯನ್ನು ಸ್ಮರಿಸುವ ಮತ್ತು ಪರಿಚಯಿಸುವ ಕಾರ್ಯವನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿದೆ. ಜನಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುವ ಮೂಲಕ‌ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಿನ ಕಾರ್ಯಕ್ರಮಗಳನ್ನು ಕನ್ನಡ ಸಾಹಿತ್ಯ ಪರಿಷತ್ತು  ನಡೆಸಲಾಗುತ್ತಿದೆ. ಆಜೀವ ಸದಸ್ಯತ್ವ ಅಭಿಯಾನ ಮೂಲಕ‌ ಕನ್ನಡ ಸಾಹಿತ್ಯ ಪರಿಷತ್ತು ಕೋಟಿ ಸದಸ್ಯರನ್ನು‌  ಹೊಂದಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯಿತಿ ಮಾಜಿ ಸದಸ್ಯ ಚುಂಚೇಗೌಡ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿಪತಯ್ಯ, ಭಜನಾ ಮಂಡಲಿ ಅಧ್ಯಕ್ಷ ನಂಜೇಗೌಡ,  ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್, ಅಶ್ವತ್ಥಗೌಡ, ಸಂಘಟನಾ ಕಾರ್ಯದರ್ಶ ರಾಜಘಟ್ಟ ರವಿ, ವಿನೋದಗೌಡ,  ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ  ಪಿ.ಗೋವಿಂದರಾಜು, ಮಧುರೆ ಹೋಬಳಿ ಘಟಕದ ಅಧ್ಯಕ್ಷ ಜಿ.ಸುರೇಶ್, ಶಿಕ್ಷಕರ‌ ಸಂಘದ ಮಾಜಿ ಅಧ್ಯಕ್ಷ ಶಂಕರಪ್ಪ, ಭಾರತ ಸೇವಾದಳದ ಕೆಂಪೇಗೌಡ, ಸೇವಾ ಸಮಿತಿ ಅಧ್ಯಕ್ಷ ಮರಿಯಣ್ಣ, ಕಸಾಪ ಪದಾಧಿಕಾರಿಗಳಾದ ಶರಣಯ್ಯ ಹಿರೇಮಠ, ಪರಮೇಶ್, ಗಿರೀಶ್.ಎನ್.ಬರಗೂರು, ಜಿ.ಸುರೇಶ್, ಹೊಂಗಿರಣ    ಬಳಗದ ಅಧ್ಯಕ್ಷ  ಸಿ.ಗೋವಿಂದರಾಜು, ಟಿ.ಸಿ.ವೆಂಕಟಾಚಲಪತಿ, ಮುದ್ದುಗಂಗಯ್ಯ, ಚಂದ್ರಶೇಖರ್, ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ  ಬೀರೇಶ್, ನೆಲಮಂಗಲ ಕಸಾಪ ಅಧ್ಯಕ್ಷ ಪ್ರದೀಪಕುಮಾರ್  ಮುಂತಾದವರು ಭಾಗವಹಿಸಿದ್ದರು.

Ramesh Babu

Journalist

Recent Posts

ಕೇವಲ 200 ರೂ. ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಕೊಲೆ

ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…

3 hours ago

2025–26 ಹಣಕಾಸು ವರ್ಷದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣದ ದಾಖಲೆ ಬೆಳವಣಿಗೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…

6 hours ago

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ- ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣವಾಗಿ ತ್ಯಜಿಸಬೇಕು- ಪೊಲೀಸ್ ಮೇಷ್ಟ್ರಿಂದ ರೌಡಿಗಳಿಗೆ ಕಾನೂನು ಪಾಠ: ಮಿಟ್ಟೆ ಗ್ಯಾಂಗ್ ಗೆ ವಿಶೇಷ ವಾರ್ನಿಂಗ್

ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…

18 hours ago

ಮದುವೆ ಸಂಭ್ರಮದ ನಡುವೆ ಬೈಕ್ ಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…

1 day ago

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಹಿನ್ನೆಲೆ: ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ

ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…

1 day ago

ಮೆಜೆಸ್ಟಿಕ್‌ನಿಂದ ಘಾಟಿ ಸುಬ್ರಮಣ್ಯಕ್ಕೆ ಬಿಎಂಟಿಸಿ ಹೊಸದಾಗಿ ನೇರ ಬಸ್‌ ಸೇವೆ ಆರಂಭ

ಬೆಂಗಳೂರು: ಬೆಂಗಳೂರು‌ ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…

2 days ago