ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. 8 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಶಿವಕುಮಾರ್-ಸಿಇ, ಸಂತೋಷ್ ಕುಮಾರ್-ಇಇ, ವಿಜಯಲಕ್ಷ್ಮಿ-ಇಇ, ಶ್ರೀಧರ್-ಎಇಇ, ಜ್ಯೋತಿ-ಜೆಇ, ಶ್ರೀನಿವಾಸ್-ಜೆಇ, ಮನೋಜ್-ಕಂಪ್ಯೂಟರ್ ಆಪರೇಟರ್, ಕಿರಣ್-ಇಇ, ಸಿರಾಜ್-ಎಫ್ಡಿಎ ಗಾಯಗೊಂಡವರು. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್ ನಲ್ಲಿದಾರೆ, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು.
ನನಗೆ ಇರೋ ಮಾಹಿತಿ ಪ್ರಕಾರ ಬರೀ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸೋ ವೇಳೆ ಬೆಂಕಿ ಅವಘಢ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ ಎಂದರು.
ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…
ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ…
ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…
ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…
ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…