ಬೆಂಗಳೂರಿನ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಶುಕ್ರವಾರ ಸಂಜೆ 5 ಗಂಟೆ ಸುಮಾರಿಗೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. 8 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಶಿವಕುಮಾರ್-ಸಿಇ, ಸಂತೋಷ್ ಕುಮಾರ್-ಇಇ, ವಿಜಯಲಕ್ಷ್ಮಿ-ಇಇ, ಶ್ರೀಧರ್-ಎಇಇ, ಜ್ಯೋತಿ-ಜೆಇ, ಶ್ರೀನಿವಾಸ್-ಜೆಇ, ಮನೋಜ್-ಕಂಪ್ಯೂಟರ್ ಆಪರೇಟರ್, ಕಿರಣ್-ಇಇ, ಸಿರಾಜ್-ಎಫ್ಡಿಎ ಗಾಯಗೊಂಡವರು. ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ಜೆ ಜಾರ್ಜ್, ಘಟನೆಯಾದ ನಂತರ ಎಲ್ಲರನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಎಲ್ಲರೂ ಔಟ್ ಆಫ್ ಡೇಂಜರ್ ನಲ್ಲಿದಾರೆ, ಎಲ್ಲರಿಗೂ ಚಿಕಿತ್ಸೆ ನೀಡಲಾಗ್ತಿದೆ, ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದರು.
ನನಗೆ ಇರೋ ಮಾಹಿತಿ ಪ್ರಕಾರ ಬರೀ ಲ್ಯಾಬ್ ಗೆ ಬೆಂಕಿ ಬಿದ್ದಿದೆ. ಲ್ಯಾಬ್ ನಲ್ಲಿ ಕೆಲವು ಕೆಮಿಕಲ್ಸ್ ಇತ್ತು, ಟೆಸ್ಟ್ ನಡೆಸೋ ವೇಳೆ ಬೆಂಕಿ ಅವಘಢ ಸಂಭವಿಸಿದೆ. ತನಿಖೆ ನಂತರ ಅಸಲಿ ವಿಚಾರ ಹೊರ ಬರುತ್ತೆ ಎಂದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…