Categories: ಕೋಲಾರ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸದಸ್ಯರ ನೇಮಕ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,

ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ ವಿಧ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ ಉಳಿವಿಗಾಗಿ ಹಾಗೂ ಬಲವರ್ಧನೆಗಾಗಿ ಸಾಕಷ್ಟು ಹೋರಾಟಗಳನ್ನು ಸಂಘಟಿಸಿದ್ದು ಇವರನ್ನು ನೇಮಕ ಮಾಡಲಾಗಿದೆ

ಇನ್ನೂ ಕೋಲಾರದ ಷಹೀನ್ ಷಾ ನಗರದ ಅರ್ಬಾಜ್ ಪಾಷ ಅವರು ಸುಮಾರು 10 ವರ್ಷಗಳ ಉಪನ್ಯಾಸಕ ವೃತ್ತಿಯೊಂದಿಗೆ ಬೆಂಗಳೂರಿನ ಕಿಂಗ್ ಸ್ಟನ್ ಕಾಲೇಜಿನಲ್ಲಿ ೭ ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ ಇವರ ಶೈಕ್ಷಣಿಕ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಆಯ್ಕೆ ಮಾಡಲಾಗಿದೆ ಮತ್ತೊಬ್ಬರು ನಗರದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಜೈದೀಪ್ ಅವರನ್ನು ಸಹ ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ,

ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್ ಸದಸ್ಯರಾಗಿ ನೇಮಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಶಾಸಕ ಕೊತ್ತೂರು ಮಂಜುನಾಥ್, ಎಸ್.ಎನ್ ನಾರಾಯಣಸ್ವಾಮಿ, ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರಿಗೆ ಮುಖಂಡರಿಗೆ ಧನ್ಯವಾದಗಳು ಅವರುಗಳು ಮಾರ್ಗದರ್ಶನದಲ್ಲಿ ಹೊಸ ವಿವಿಯನ್ನು ಮಾದರಿ ವಿಶ್ವವಿದ್ಯಾಲಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ನೂತನ ಸಿಂಡಿಕೇಟ್ ಸದಸ್ಯರು ತಿಳಿಸಿದ್ದಾರೆ

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

7 hours ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

8 hours ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

20 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

2 days ago