Categories: ಕೋಲಾರ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸದಸ್ಯರ ನೇಮಕ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,

ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ ವಿಧ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ ಉಳಿವಿಗಾಗಿ ಹಾಗೂ ಬಲವರ್ಧನೆಗಾಗಿ ಸಾಕಷ್ಟು ಹೋರಾಟಗಳನ್ನು ಸಂಘಟಿಸಿದ್ದು ಇವರನ್ನು ನೇಮಕ ಮಾಡಲಾಗಿದೆ

ಇನ್ನೂ ಕೋಲಾರದ ಷಹೀನ್ ಷಾ ನಗರದ ಅರ್ಬಾಜ್ ಪಾಷ ಅವರು ಸುಮಾರು 10 ವರ್ಷಗಳ ಉಪನ್ಯಾಸಕ ವೃತ್ತಿಯೊಂದಿಗೆ ಬೆಂಗಳೂರಿನ ಕಿಂಗ್ ಸ್ಟನ್ ಕಾಲೇಜಿನಲ್ಲಿ ೭ ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ ಇವರ ಶೈಕ್ಷಣಿಕ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಆಯ್ಕೆ ಮಾಡಲಾಗಿದೆ ಮತ್ತೊಬ್ಬರು ನಗರದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಜೈದೀಪ್ ಅವರನ್ನು ಸಹ ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ,

ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್ ಸದಸ್ಯರಾಗಿ ನೇಮಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಶಾಸಕ ಕೊತ್ತೂರು ಮಂಜುನಾಥ್, ಎಸ್.ಎನ್ ನಾರಾಯಣಸ್ವಾಮಿ, ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರಿಗೆ ಮುಖಂಡರಿಗೆ ಧನ್ಯವಾದಗಳು ಅವರುಗಳು ಮಾರ್ಗದರ್ಶನದಲ್ಲಿ ಹೊಸ ವಿವಿಯನ್ನು ಮಾದರಿ ವಿಶ್ವವಿದ್ಯಾಲಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ನೂತನ ಸಿಂಡಿಕೇಟ್ ಸದಸ್ಯರು ತಿಳಿಸಿದ್ದಾರೆ

Ramesh Babu

Journalist

Recent Posts

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

35 minutes ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

2 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

10 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

20 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

21 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

1 day ago