Categories: ಕೋಲಾರ

ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸಿಂಡಿಕೇಟ್‌ ಸದಸ್ಯರ ನೇಮಕ

ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ತಾಲೂಕಿನ ಸೀಸಂದ್ರ ಗೋಪಾಲಗೌಡ, ಅರ್ಬಾಜ್ ಪಾಷ, ಹಾಗೂ ಎಸ್.ಜೈದೀಪ್ ಅವರನ್ನು ರಾಜ್ಯಪಾಲರ ಅಜ್ಞನುಸಾರ ಉನ್ನತ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಕೆ ಮಂಜುನಾಥ್ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ,

ತಾಲೂಕಿನ ಸೀಸಂದ್ರ ಗ್ರಾಮದ ಎಂ.ಗೋಪಾಲಗೌಡ ಅವರು ಕಾಂಗ್ರೆಸ್ ವಿಧ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷ, ರಾಜ್ಯ ಉಪಾಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿದ್ದಾರೆ ವಿಧ್ಯಾರ್ಥಿ ದೆಸೆಯಿಂದಲೂ ಬೆಂಗಳೂರು ವಿವಿಯ ಉಳಿವಿಗಾಗಿ ಹಾಗೂ ಬಲವರ್ಧನೆಗಾಗಿ ಸಾಕಷ್ಟು ಹೋರಾಟಗಳನ್ನು ಸಂಘಟಿಸಿದ್ದು ಇವರನ್ನು ನೇಮಕ ಮಾಡಲಾಗಿದೆ

ಇನ್ನೂ ಕೋಲಾರದ ಷಹೀನ್ ಷಾ ನಗರದ ಅರ್ಬಾಜ್ ಪಾಷ ಅವರು ಸುಮಾರು 10 ವರ್ಷಗಳ ಉಪನ್ಯಾಸಕ ವೃತ್ತಿಯೊಂದಿಗೆ ಬೆಂಗಳೂರಿನ ಕಿಂಗ್ ಸ್ಟನ್ ಕಾಲೇಜಿನಲ್ಲಿ ೭ ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದಾರೆ ಇವರ ಶೈಕ್ಷಣಿಕ ಹಾಗೂ ಸಮಾಜ ಸೇವೆಯನ್ನು ಗುರುತಿಸಿ ಇವರನ್ನು ಆಯ್ಕೆ ಮಾಡಲಾಗಿದೆ ಮತ್ತೊಬ್ಬರು ನಗರದ ಮದರ್ ತೆರೇಸಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಜೈದೀಪ್ ಅವರನ್ನು ಸಹ ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್‌ ಸದಸ್ಯರಾಗಿ ನಾಮನಿರ್ದೇಶನ ಮಾಡಿದ್ದಾರೆ,

ಬೆಂಗಳೂರು ಉತ್ತರ ವಿವಿಗೆ ಸಿಂಡಿಕೇಟ್ ಸದಸ್ಯರಾಗಿ ನೇಮಿಸಲು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಶಾಸಕ ಕೊತ್ತೂರು ಮಂಜುನಾಥ್, ಎಸ್.ಎನ್ ನಾರಾಯಣಸ್ವಾಮಿ, ಎಂಎಲ್ಸಿ ಅನಿಲ್ ಕುಮಾರ್ ಸೇರಿದಂತೆ ಜಿಲ್ಲೆಯ ಶಾಸಕರಿಗೆ ಮುಖಂಡರಿಗೆ ಧನ್ಯವಾದಗಳು ಅವರುಗಳು ಮಾರ್ಗದರ್ಶನದಲ್ಲಿ ಹೊಸ ವಿವಿಯನ್ನು ಮಾದರಿ ವಿಶ್ವವಿದ್ಯಾಲಯವಾಗಿಸಲು ಒಗ್ಗಟ್ಟಿನಿಂದ ಶ್ರಮಿಸುತ್ತೇವೆ ಎಂದು ನೂತನ ಸಿಂಡಿಕೇಟ್ ಸದಸ್ಯರು ತಿಳಿಸಿದ್ದಾರೆ

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 days ago