ಬೆಂಗಳೂರು ಕೂಗಳತೆ ದೂರದಲ್ಲಿ ಇನ್ನೂ ಜೀವಂತವಿದೆ ಅಸ್ಪೃಶ್ಯತೆ: ದೇವಾಲಯಕ್ಕೆ ‌ದಲಿತರಿಗೆ ನಿಷೇಧ: ತಹಶೀಲ್ದಾರ್ ನೇತೃತ್ವದಲ್ಲಿ ದಲಿತರಿಗೆ ದೇವಾಲಯ ಪ್ರವೇಶ

ಸರ್ಕಾರಗಳು ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ಕಠಿಣ ಕಾನೂನು ಜಾರಿ ಮಾಡಿದೆ. ಆದರೆ ಬೆಂಗಳೂರಿಗೆ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವಾಲಯಕ್ಕೆ ಆ ಗ್ರಾಮದಲ್ಲಿ ದಲಿತರ ಪ್ರವೇಶ ನಿಷೇಧ. ಓರ್ವ ಮಹಿಳೆಯ ಧೈರ್ಯದಿಂದಾಗಿ ತಾಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ, ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ….

ಹೌದು…. ಹೀಗೆ ಗ್ರಾಮದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಾಳು, ಅಧಿಕಾರಿಗಳ ಮುಂದೆ ತಮಗಾದ ತಾರತಮ್ಯವನ್ನ ಹೇಳುತ್ತಿರುವ ಮಹಿಳೆ, ಗ್ರಾಮದಲ್ಲಿ ಶಾಂತಿ ಸಭೆ ಮಾಡುತ್ತಿರುವ ತಹಶಿಲ್ದಾರ್…. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದಲ್ಲಿ.

ಹೌದು… ಈ ಗ್ರಾಮದ ಹೇಗಡ್ಲಮ್ಮ ದೇವಾಲಯಕ್ಕೆ ದಲಿತರಿಗೆ ಪ್ರವೇಶ ಇಲ್ಲ. ದಲಿತರು ದೇವರಿಗೆ ಪೂಜೆ ಮಾಡಿಸಲು ಬಂದಾಗ ದೇವಾಲಯದ ಒಳಗೆ ಬಿಡದೆ ಹೊರಗೇ ನಿಲ್ಲಿಸಿ ಆರತಿ ನೀಡಲಾಗುತ್ತಿತ್ತು. ದೇವಾಲಯ ನಿರ್ಮಾಣಕ್ಕೆ ಗ್ರಾಮದ ಎಲ್ಲಾ ಜನಾಂಗದ ಜನರಿಂದಲೂ ತೆರಿಗೆ ಹಣ ಸಂಗ್ರಹ ಮಾಡಲಾಗಿತ್ತು. ಜಾತ್ರಾ ಸಮಯದಲ್ಲಿಯೂ ಕೂಡ ದೇವಾಲಯಕ್ಕೆ ದಲಿತರಿಗೆ ಪ್ರವೇಶವಿಲ್ಲ. ಅವರು ಕೊಡುವ ತೆರಿಗೆ ಹಣ ಮಾತ್ರ ಬೇಕು, ದೇವಾಲಯದ ಒಳಗೆ ಮಾತ್ರ ಪ್ರವೇಶವಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ.  ಹಾಗಾಗಿ ಊರಿನ ಓರ್ವ ಮಹಿಳೆ ಧೈರ್ಯ ಮಾಡಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಇನ್ನೂ ಅಸ್ಪೃಶ್ಯತೆ ವಿಚಾರವಾಗಿ ದೂರು ಬಂದ ಹಿನ್ನೆಲೆ, ತಹಶಿಲ್ದಾರ್ ವಿಭಾ ವಿದ್ಯಾ ರಾಥೊಡ್, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಸಾಧಿಕ್ ಪಾಷ  ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ಮಾಡಿದರು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮದ ಮುಖಂಡರ ನೇತೃತ್ವದಲ್ಲಿ ಸಭೆ ನಡೆದು, ದೇವಾಲಯ ಪ್ರವೇಶಕ್ಕೆ ಯಾರಿಗೂ ಅಡ್ಡಿ ಇಲ್ಲ ಎಂಬ ನಿರ್ಧಾರಕ್ಕೆ ಬಂದರು. ನಂತರ ಪಂಚಾಯತಿ ಅಧ್ಯಕ್ಷೆಯೇ ಪೂಜೆ ಮಾಡಿ ದಲಿತರಿಗೆ ಆರತಿಯನ್ನ ನೀಡಿದರು.

ನೂರಾರು ವರ್ಷಗಳ ಇತಿಹಾಸವುಳ್ಳ ದೇವಾಲಯ ಈಗ ಅಸ್ಪೃಶ್ಯತೆಯಿಂದ ಕುಖ್ಯಾತಿ ಪಡೆದಿದೆ. ಅಲ್ಲದೆ ಈ ಹಿಂದಿನಿಂದಲೂ ಪೂಜೆ ಮಾಡಿಕೊಂಡು ಬರುತ್ತಿದ್ದ ಪೂಜಾರಿ ಇನ್ನು ಮುಂದೆ ದೇವರಿಗೆ ಪೂಜೆ ಸಲ್ಲಿಸಲ್ಲ ಎಂಬ ನಿರ್ಧಾರಕ್ಕೆ ಬಂದ ಹಿನ್ನಲೆ, ಈಗ ತಾಲೂಕು ಆಡಳಿತ ಹೊಸ ಪೂಜಾರಿಯ ಹುಡುಕಾಟದಲ್ಲಿದೆ. ಅಲ್ಲದೆ ಶಾಂತಿ ಸಭೆಯ ನಂತರ ದೇವಾಲಯ ಬೀಗ ಕೂಡ ಹಾಕಿಲ್ಲ. ಇದೇ ವಿಚಾರಕ್ಕೆ ಪಂಚಾಯತಿಯಲ್ಲಿ ಸರ್ವ ಸದಸ್ಯರ ಸಭೆ ಕರೆದು ಮುಂದಿನ ನಡೆಯ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ.

ಒಟ್ಟಾರೆ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ಅಧಿಕಾರಿಗಳು ಜನರಿಗೆ ಅರಿವು ಮೂಡಿಸಬೇಕಿದೆ. ಇನ್ನು ಈ ಗ್ರಾಮದ ಮಹಿಳೆ ತೋರಿದ ಧೈರ್ಯಕ್ಕೆ ಒಂದು ಸಮಾಜ ವಿರೋಧ ವ್ಯಕ್ತಪಡಿಸಿದರೂ ದಲಿತರಿಗೆ ಸಮಾನತೆ ದೊರೆತಿದ್ದು ಪ್ರಶಂಸನೀಯ. ಇನ್ನಾದರೂ ಗ್ರಾಮಸ್ಥರು ಅನಿಷ್ಟ ಪದ್ದತಿಗಳನ್ನ ಬಿಟ್ಟು ಎಲ್ಲರೂ ಒಟ್ಟಾಗಿ ಸಮನ್ವಯ ರೀತಿಯಲ್ಲಿ ಬಾಳುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

11 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

16 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

16 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

24 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

2 days ago