ಬೆಂಗಳೂರು ಕೂಗಳತೆ ದೂರದಲ್ಲಿ ಇನ್ನೂ ಜೀವಂತವಿದೆ ಅಸ್ಪೃಶ್ಯತೆ: ದೇವಾಲಯಕ್ಕೆ ‌ದಲಿತರಿಗೆ ನಿಷೇಧ: ತಹಶೀಲ್ದಾರ್ ನೇತೃತ್ವದಲ್ಲಿ ದಲಿತರಿಗೆ ದೇವಾಲಯ ಪ್ರವೇಶ

ಸರ್ಕಾರಗಳು ಸಮಾಜದಲ್ಲಿ ಅಸ್ಪೃಶ್ಯತೆ ಹೋಗಲಾಡಿಸಲು ಕಠಿಣ ಕಾನೂನು ಜಾರಿ ಮಾಡಿದೆ. ಆದರೆ ಬೆಂಗಳೂರಿಗೆ ಕೂಗಳತೆ ದೂರದಲ್ಲೇ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ದೇವಾಲಯಕ್ಕೆ ಆ ಗ್ರಾಮದಲ್ಲಿ ದಲಿತರ ಪ್ರವೇಶ ನಿಷೇಧ. ಓರ್ವ ಮಹಿಳೆಯ ಧೈರ್ಯದಿಂದಾಗಿ ತಾಲೂಕು ಆಡಳಿತ ಗ್ರಾಮಕ್ಕೆ ಭೇಟಿ ನೀಡಿ, ದಲಿತರಿಗೆ ದೇವಾಲಯ ಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ. ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ….

ಹೌದು…. ಹೀಗೆ ಗ್ರಾಮದಲ್ಲಿ ಬೀಡು ಬಿಟ್ಟಿರುವ ಅಧಿಕಾರಿಗಾಳು, ಅಧಿಕಾರಿಗಳ ಮುಂದೆ ತಮಗಾದ ತಾರತಮ್ಯವನ್ನ ಹೇಳುತ್ತಿರುವ ಮಹಿಳೆ, ಗ್ರಾಮದಲ್ಲಿ ಶಾಂತಿ ಸಭೆ ಮಾಡುತ್ತಿರುವ ತಹಶಿಲ್ದಾರ್…. ಈ ಎಲ್ಲಾ ದೃಶ್ಯಗಳು ಕಂಡುಬಂದಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗೂಳ್ಯ ಗ್ರಾಮದಲ್ಲಿ.

ಹೌದು… ಈ ಗ್ರಾಮದ ಹೇಗಡ್ಲಮ್ಮ ದೇವಾಲಯಕ್ಕೆ ದಲಿತರಿಗೆ ಪ್ರವೇಶ ಇಲ್ಲ. ದಲಿತರು ದೇವರಿಗೆ ಪೂಜೆ ಮಾಡಿಸಲು ಬಂದಾಗ ದೇವಾಲಯದ ಒಳಗೆ ಬಿಡದೆ ಹೊರಗೇ ನಿಲ್ಲಿಸಿ ಆರತಿ ನೀಡಲಾಗುತ್ತಿತ್ತು. ದೇವಾಲಯ ನಿರ್ಮಾಣಕ್ಕೆ ಗ್ರಾಮದ ಎಲ್ಲಾ ಜನಾಂಗದ ಜನರಿಂದಲೂ ತೆರಿಗೆ ಹಣ ಸಂಗ್ರಹ ಮಾಡಲಾಗಿತ್ತು. ಜಾತ್ರಾ ಸಮಯದಲ್ಲಿಯೂ ಕೂಡ ದೇವಾಲಯಕ್ಕೆ ದಲಿತರಿಗೆ ಪ್ರವೇಶವಿಲ್ಲ. ಅವರು ಕೊಡುವ ತೆರಿಗೆ ಹಣ ಮಾತ್ರ ಬೇಕು, ದೇವಾಲಯದ ಒಳಗೆ ಮಾತ್ರ ಪ್ರವೇಶವಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕುತ್ತಿದ್ದಾರೆ.  ಹಾಗಾಗಿ ಊರಿನ ಓರ್ವ ಮಹಿಳೆ ಧೈರ್ಯ ಮಾಡಿ ಅಧಿಕಾರಿಗಳಿಗೆ ದೂರು ನೀಡಿದ್ದರು.

ಇನ್ನೂ ಅಸ್ಪೃಶ್ಯತೆ ವಿಚಾರವಾಗಿ ದೂರು ಬಂದ ಹಿನ್ನೆಲೆ, ತಹಶಿಲ್ದಾರ್ ವಿಭಾ ವಿದ್ಯಾ ರಾಥೊಡ್, ಡಿವೈಎಸ್ಪಿ ರವಿ, ಇನ್ಸ್ಪೆಕ್ಟರ್ ಸಾಧಿಕ್ ಪಾಷ  ಗ್ರಾಮಕ್ಕೆ ಭೇಟಿ ನೀಡಿ ಶಾಂತಿ ಸಭೆ ಮಾಡಿದರು. ಈ ವೇಳೆ ಗ್ರಾಮ ಪಂಚಾಯತಿ ಅಧ್ಯಕ್ಷರು, ಗ್ರಾಮದ ಮುಖಂಡರ ನೇತೃತ್ವದಲ್ಲಿ ಸಭೆ ನಡೆದು, ದೇವಾಲಯ ಪ್ರವೇಶಕ್ಕೆ ಯಾರಿಗೂ ಅಡ್ಡಿ ಇಲ್ಲ ಎಂಬ ನಿರ್ಧಾರಕ್ಕೆ ಬಂದರು. ನಂತರ ಪಂಚಾಯತಿ ಅಧ್ಯಕ್ಷೆಯೇ ಪೂಜೆ ಮಾಡಿ ದಲಿತರಿಗೆ ಆರತಿಯನ್ನ ನೀಡಿದರು.

ನೂರಾರು ವರ್ಷಗಳ ಇತಿಹಾಸವುಳ್ಳ ದೇವಾಲಯ ಈಗ ಅಸ್ಪೃಶ್ಯತೆಯಿಂದ ಕುಖ್ಯಾತಿ ಪಡೆದಿದೆ. ಅಲ್ಲದೆ ಈ ಹಿಂದಿನಿಂದಲೂ ಪೂಜೆ ಮಾಡಿಕೊಂಡು ಬರುತ್ತಿದ್ದ ಪೂಜಾರಿ ಇನ್ನು ಮುಂದೆ ದೇವರಿಗೆ ಪೂಜೆ ಸಲ್ಲಿಸಲ್ಲ ಎಂಬ ನಿರ್ಧಾರಕ್ಕೆ ಬಂದ ಹಿನ್ನಲೆ, ಈಗ ತಾಲೂಕು ಆಡಳಿತ ಹೊಸ ಪೂಜಾರಿಯ ಹುಡುಕಾಟದಲ್ಲಿದೆ. ಅಲ್ಲದೆ ಶಾಂತಿ ಸಭೆಯ ನಂತರ ದೇವಾಲಯ ಬೀಗ ಕೂಡ ಹಾಕಿಲ್ಲ. ಇದೇ ವಿಚಾರಕ್ಕೆ ಪಂಚಾಯತಿಯಲ್ಲಿ ಸರ್ವ ಸದಸ್ಯರ ಸಭೆ ಕರೆದು ಮುಂದಿನ ನಡೆಯ ಬಗ್ಗೆ ತೀರ್ಮಾನ ಮಾಡಲಾಗುತ್ತಿದೆ.

ಒಟ್ಟಾರೆ ಹಳ್ಳಿಗಳಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದ್ದು, ಅಧಿಕಾರಿಗಳು ಜನರಿಗೆ ಅರಿವು ಮೂಡಿಸಬೇಕಿದೆ. ಇನ್ನು ಈ ಗ್ರಾಮದ ಮಹಿಳೆ ತೋರಿದ ಧೈರ್ಯಕ್ಕೆ ಒಂದು ಸಮಾಜ ವಿರೋಧ ವ್ಯಕ್ತಪಡಿಸಿದರೂ ದಲಿತರಿಗೆ ಸಮಾನತೆ ದೊರೆತಿದ್ದು ಪ್ರಶಂಸನೀಯ. ಇನ್ನಾದರೂ ಗ್ರಾಮಸ್ಥರು ಅನಿಷ್ಟ ಪದ್ದತಿಗಳನ್ನ ಬಿಟ್ಟು ಎಲ್ಲರೂ ಒಟ್ಟಾಗಿ ಸಮನ್ವಯ ರೀತಿಯಲ್ಲಿ ಬಾಳುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago