ಬೆಂಗಳೂರು ಗ್ರಾಮಾಂತರದಲ್ಲಿ ನೀಟ್ ಮರು ಪರೀಕ್ಷೆ ಸುಸೂತ್ರ: 2,536 ವಿದ್ಯಾರ್ಥಿಗಳ ಹಾಜರಾತಿ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ನಡೆದ ನೀಟ್ (NEET) ಮರು ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು.

 ಜಿಲ್ಲೆಯಾದ್ಯಂತ 2,536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 838 ಮಂದಿ ಗೈರಾಗಿದ್ದಾರೆ.

ದೊಡ್ಡಬಳ್ಳಾಪುರದ 4 ಹಾಗೂ ದೇವನಹಳ್ಳಿಯ 4 ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 8 ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಿತು.

ಜಿಲ್ಲೆಯಲ್ಲಿ ಒಟ್ಟು 3,374 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ 2,536 ಮಂದಿ ಪರೀಕ್ಷೆ ಬರೆದಿದ್ದಾರೆ.

ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದವು. ಎಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟುನಿಟ್ಟಿನ ಭದ್ರತೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಮರು ಪರೀಕ್ಷೆಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಗ್ರೇಡ್-1 ಸರ್ಕಾರಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿತ್ತು. ಅಭ್ಯರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ದಾಖಲೆಗಳ ಪರಿಶೀಲನೆಯ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಲಾಯಿತು.

ಇದಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ನಿರಂತರ ನಿಗಾವಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

5 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

9 hours ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

12 hours ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

1 day ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

2 days ago

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

2 days ago