ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ 8 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ನಡೆದ ನೀಟ್ (NEET) ಮರು ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ಸುಸೂತ್ರವಾಗಿ ನಡೆಯಿತು.
ಜಿಲ್ಲೆಯಾದ್ಯಂತ 2,536 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 838 ಮಂದಿ ಗೈರಾಗಿದ್ದಾರೆ.
ದೊಡ್ಡಬಳ್ಳಾಪುರದ 4 ಹಾಗೂ ದೇವನಹಳ್ಳಿಯ 4 ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಂತೆ ಒಟ್ಟು 8 ಕೇಂದ್ರಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ ಪರೀಕ್ಷೆ ನಡೆಯಿತು.
ಜಿಲ್ಲೆಯಲ್ಲಿ ಒಟ್ಟು 3,374 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ಅವರಲ್ಲಿ 2,536 ಮಂದಿ ಪರೀಕ್ಷೆ ಬರೆದಿದ್ದಾರೆ.
ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತ ಮತ್ತು ಸಂಬಂಧಿತ ಇಲಾಖೆಗಳು ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದ್ದವು. ಎಲ್ಲಾ ಕೇಂದ್ರಗಳಲ್ಲಿಯೂ ಪರೀಕ್ಷೆ ಶಾಂತಿಯುತವಾಗಿ ಹಾಗೂ ವ್ಯವಸ್ಥಿತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟುನಿಟ್ಟಿನ ಭದ್ರತೆ
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಮರು ಪರೀಕ್ಷೆಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಗ್ರೇಡ್-1 ಸರ್ಕಾರಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿತ್ತು. ಅಭ್ಯರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಲಾಗಿದ್ದು, ದಾಖಲೆಗಳ ಪರಿಶೀಲನೆಯ ನಂತರವೇ ಪರೀಕ್ಷಾ ಕೇಂದ್ರ ಪ್ರವೇಶಕ್ಕೆ ಅವಕಾಶ ನೀಡಲಾಯಿತು.
ಇದಲ್ಲದೆ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಿಗಿ ಭದ್ರತೆ ಕಲ್ಪಿಸಲಾಗಿತ್ತು. ಪರೀಕ್ಷೆಯ ಪಾರದರ್ಶಕತೆ ಹಾಗೂ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ನಿರಂತರ ನಿಗಾವಹಿಸಿ ಪರೀಕ್ಷೆ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…