ಬೆಂಗಳೂರು ಗ್ರಾಮಾಂತರ ಜಿಲ್ಲೆ ಎಸಿ, ಡಿಸಿ ಕೋರ್ಟ್ ನಲ್ಲಿ ಬಾಕಿ ಪ್ರಕರಣ: ತರಾಟೆಗೆ ತೆಗೆದುಕೊಂಡ ಸಿಎಂ: ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದ ಸಿಎಂ‌

ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್‌ನಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಜಿಲ್ಲೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ‌ ಸೂಚನೆ ನೀಡಿದರು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.

Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ‌ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.

ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.

ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.

Ramesh Babu

Journalist

Recent Posts

ಒಂದು ವರ್ಷದೊಳಗೆ ಎತ್ತಿನಹೊಳೆ ನೀರು- ಸಚಿವ ಕೆ.ಎಚ್ ಮುನಿಯಪ್ಪ

ಎತ್ತಿನಹೊಳೆ ಯೋಜನೆ ಕಾಮಗಾರಿಯು ತ್ವರಿತಗತಿಯಲ್ಲಿ ಸಾಗುತ್ತಿದ್ದು ಒಂದು ವರ್ಷದಲ್ಲಿ ಜಿಲ್ಲೆಗೆ ನೀರು ಹರಿಯುವ ವಿಶ್ವಾಸವಿದೆ ಎಂದು ಆಹಾರ ನಾಗರಿಕ ಸರಬರಾಜು…

10 hours ago

ಡಿ.15ರಂದು ಕಾಣೆಯಾಗಿದ್ದ 15 ವರ್ಷದ ಬಾಲಕ ಇಂದು ಶವವಾಗಿ ಪತ್ತೆ

ಡಿ.15 ರಂದು ಕಾಣೆಯಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ ಇಂದು ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ…

16 hours ago

ಬಸ್ಸಿನಲ್ಲಿ 55 ಲಕ್ಷ ಹಣ ಮತ್ತು ಬಿಲ್ಡಿಂಗ್ ಗೆ ಸಂಬಂಧಿಸಿದ ದಾಖಲಾತಿಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರ ಬಂಧನ

ಬಸ್ಸಿನಲ್ಲಿ ಸಾಗಿಸುತ್ತಿದ್ದ 55 ಲಕ್ಷ ರೂ. ನಗದು ಹಾಗೂ ಕಟ್ಟಡಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಳವು ಮಾಡಿದ್ದ ಅಂತಾರಾಜ್ಯ ಕಳ್ಳರನ್ನ ಬಂಧಿಸುವಲ್ಲಿ…

17 hours ago

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಒಂದೇ ಗ್ರಾಮದ ನಾಲ್ವರು ಯುವಕರು ದುರ್ಮರಣ: ಮುಗಿಲು ಮುಟ್ಟಿದ ಇಬ್ಬರು ಮಕ್ಕಳನ್ನು ಕಳೆದುಕೊಂಡ ತಾಯಿಯ ಆಕ್ರಂದನ: ಇಡೀ ಗ್ರಾಮದಲ್ಲಿ ಮನೆ ಮಾಡಿದ ಸೂತಕದ ವಾತಾವರಣ

ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…

20 hours ago

ಅಭಿಮಾನಿಗಳ ಅತಿರೇಕ….ಯಾಕಪ್ಪಾ, ಏನಾಗಿದೆ ಸಮಸ್ಯೆ…?

ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…

21 hours ago

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 days ago