ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ನಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಜಿಲ್ಲೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.
Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.
ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.
ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…