ಬೆಂಗಳೂರು ಗ್ರಾಮಾಂತರ ಜಿಲ್ಲೆ AC, DC ಕೋರ್ಟ್ನಲ್ಲಿ ಸಾಕಷ್ಟು ಪ್ರಕರಣಗಳು ಬಾಕಿ ಇರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಜಿಲ್ಲೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಜತೆಗೆ ಅಂತಹ ಅಧಿಕಾರಿಗಳಿಗೆ ನೋಟಿಸ್ ಕೊಟ್ಟು ಸಸ್ಪೆಂಡ್ ಮಾಡಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ AC, DC, ತಹಶೀಲ್ದಾರ್ ಕೋರ್ಟ್ ಗಳಲ್ಲಿ ಬಾಕಿ ಕೇಸುಗಳು ಶೀರ್ಘ ವಿಲೇವಾರಿ ಆಗುತ್ತಿರುವುದಕ್ಕೆ ಮೆಚ್ಚುಗೆ ಸೂಚಿಸಿದ ಮುಖ್ಯಮಂತ್ರಿಗಳು ಬೆಂಗಳೂರು ಗ್ರಾಮಾಂತರ ಮತ್ತು ಇತರೆ ಎರಡು ಜಿಲ್ಲೆಗಳಲ್ಲಿ ಮಾತ್ರ AC ಮತ್ತು DC ಕೋರ್ಟ್ ಗಳಲ್ಲಿ ಐದು ವರ್ಷಕ್ಕೂ ಹಳೆಯದಾದ ಪ್ರಕರಣಗಳು ಬಾಕಿ ಇರುವುದಕ್ಕೆ ಅಸಮಾಧಾನಗೊಂಡ ಮುಖ್ಯಮಂತ್ರಿಗಳು ತರಾಟೆಗೆ ತೆಗೆದುಕೊಂಡರು.
Justice delayed is justice denied ಎನ್ನುವ ಮಾತನ್ನು ನೆನಪಿಡಿ. ಇದನ್ನು ಸಹಿಸಲು ಸಾಧ್ಯವಿಲ್ಲ. ಉಳಿದ ಜಿಲ್ಲೆಗಳಲ್ಲಿ ಪ್ರಗತಿ ಕಾಣುವಾಗ ಕೆಲವು ಮಾತ್ರ ಆಗುತ್ತಿಲ್ಲ ಎಂದರೆ ಸಹಿಸಲು ಸಾಧ್ಯವಿಲ್ಲ ಎಂದರು.
ಈ ಬಗ್ಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಿ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದರು.
ಅಗತ್ಯವಿದ್ದರೆ ಹೇಳಿ ಹಚ್ಚುವರಿ AC, DC ಗಳನ್ನು ಕೊಡಬಹುದು ಎಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…