ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿ‌ ಕೆಲ ಜಿಲ್ಲೆಗಳಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಲು ಮನವಿ

ಬೆಂಗಳೂರು ಗ್ರಾಮಾಂತರ -ಕೋಲಾರ – ಚಿಕ್ಕಬಳ್ಳಾಪುರ ಮತ್ತು ಹುಬ್ಬಳ್ಳಿ – ಧಾರವಾಡ- ಬೆಳಗಾವಿ-ವಿಜಯಪುರ ಜಿಲ್ಲೆಗಳಿಗೆ ಕೇಂದ್ರ ಸರಕಾರವು ಎರಡು ಪ್ರತ್ಯೇಕ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಬೇಕೆಂದು ಕೋರಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ರಾಜ್ಯ ಸರ್ಕಾರದ ನಿಯೋಗವು ರಕ್ಷಣಾ ಸಚಿವರಾದ ರಾಜನಾಥ್‌ ಸಿಂಗ್‌ ಅವರಿಗೆ ಮನವಿ ಸಲ್ಲಿಸಲಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಉತ್ತರಪ್ರದೇಶ ಹಾಗೂ ತಮಿಳುನಾಡು ಮಾದರಿಯಲ್ಲಿ ಕರ್ನಾಟಕದಲ್ಲಿಯೂ ರಕ್ಷಣಾ ಕಾರಿಡಾರ್ ಸ್ಥಾಪನೆ ಹಾಗೂ ಟನಲ್ ಯೋಜನೆ, ಬಳ್ಳಾರಿ ರಸ್ತೆಯಲ್ಲಿ ಲಿಂಕ್ ರೋಡ್ ಯೋಜನೆ, ಡಬಲ್ ಡೆಕ್ಕರ್ ಫ್ಲೈಓವರ್ ಯೋಜನೆಯ ನಿರ್ಮಾಣಕ್ಕೆ ಅವಶ್ಯವಿರುವ ಕೇಂದ್ರ ರಕ್ಷಣಾ ಇಲಾಖೆಗೆ ಸೇರಿದ ಜಾಗವನ್ನು ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದೇವೆ ಎಂದರು.

ಕೇಂದ್ರ ಸರಕಾರವು 2018ರಲ್ಲಿ ಉತ್ತರಪ್ರದೇಶ ಮತ್ತು ತಮಿಳುನಾಡಿಗೆ ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದೆ. ಆದರೆ, ದೇಶದ ರಕ್ಷಣಾ ಮತ್ತು ವೈಮಾಂತರಿಕ್ಷ ವಲಯದಲ್ಲಿ ಕರ್ನಾಟಕವು ಶೇ.75ರಷ್ಟು ಪಾಲು ಹೊಂದಿದ್ದು, ಜಾಗತಿಕವಾಗಿ ಮೂರನೇ ಅತ್ಯುತ್ತಮ ಕಾರ್ಯಪರಿಸರ ಹೊಂದಿರುವ ಹೆಗ್ಗಳಿಕೆ ಸಂಪಾದಿಸಿದೆ. ಹೀಗಾಗಿ, ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕಗಳಿಗೆ ಒಂದೊಂದು ಡಿಫೆನ್ಸ್‌ ಕಾರಿಡಾರ್‌ ಮಂಜೂರು ಮಾಡಿದರೆ, ಇದು ಮೇಕ್‌ ಇನ್‌ ಇಂಡಿಯಾ ಉಪಕ್ರಮಕ್ಕೂ ಬಲ ತುಂಬುತ್ತದೆ ಎಂಬುದನ್ನು ರಕ್ಷಣಾ ಸಚಿವರಿಗೆ ನಿಯೋಗವು ಮನದಟ್ಟು ಮಾಡಿಕೊಟ್ಟಿದೆ ಎಂದರು.

ಉತ್ತರ ಕರ್ನಾಟಕದ ಮೇಲ್ಕಂಡ ಮೂರು ಜಿಲ್ಲೆಗಳಲ್ಲಿ ರಕ್ಷಣಾ ವಲಯದ ಉತ್ಪಾದನಾ ಕಂಪನಿಗಳಾದ ಬಾಲೂ ಫೋರ್ಜ್‌, ಏಕಸ್‌, ಬಿಕಾರ್‌ ಏರೋಸ್ಪೇಸ್‌, ವಾಲ್‌ಚಂದ್‌ ನಗರ್‌ ಇಂಡಸ್ಟ್ರೀಸ್‌ ಮುಂತಾದವು ನೆಲೆಯೂರಿವೆ. ಜತೆಗೆ ಬೆಳಗಾವಿಯಲ್ಲಿ 250 ಎಕರೆಯಲ್ಲಿ ದೇಶದ ಪ್ರಪ್ರಥಮ ಪ್ರಿಸಿಶನ್‌ ಉತ್ಪಾದನೆಯ ವಿಶೇಷ ಆರ್ಥಿಕ ವಲಯವು ಸಕ್ರಿಯವಾಗಿದೆ. ಇಲ್ಲಿ 31 ಘಟಕಗಳಿದ್ದು, 5 ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿವೆ ಎಂದು ಈ ಸಂದರ್ಭದಲ್ಲಿ ಅವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ದಕ್ಷಿಣ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ರಕ್ಷಣಾ ಸಾಮಗ್ರಿ ಮತ್ತು ವೈಮಾಂತರಿಕ್ಷ ಕಂಪನಿಗಳಾದ ಸಾರ್ವಜನಿಕ ವಲಯದ ಎಚ್‌ಎಎಲ್‌, ಕಾಲಿನ್ಸ್‌ ಏರೋಸ್ಪೇಸ್‌, ಡೈನಮ್ಯಾಟಿಕ್‌ ಟೆಕ್ನಾಲಜೀಸ್‌, ಸೆಂಟಮ್, ಸಾಸ್ಮೋಸ್‌, ಬೆಲ್ಲಾಟ್ರಿಕ್ಸ್‌ ಮುಂತಾದವು ಇವೆ. ಇವುಗಳೊಂದಿಗೆ ಟಿಎಎಸ್‌ಎಲ್‌ ತನ್ನ ಅಂತಿಮ ಜೋಡಣಾ ಘಟಕವನ್ನು ಆರಂಭಿಸುತ್ತಿದೆ. ಏರ್‌ ಇಂಡಿಯಾ ಮತ್ತು ಇಂಡಿಗೋ ಸಾವಿರಾರು ಕೋಟಿ ರೂ. ಬಂಡವಾಳ ಹೂಡಿಕೆಯೊಂದಿಗೆ ತಮ್ಮ ಎಂಆರ್‌ಒ ಘಟಕಗಳನ್ನು ಬೆಂಗಳೂರಿನ ಸಮೀಪದಲ್ಲಿ ಸ್ಥಾಪಿಸುತ್ತಿವೆ. ದೇವನಹಳ್ಳಿಯಲ್ಲಿ 2 ಸಾವಿರ ಎಕರೆ ವಿಸ್ತಾರದ ಹೈಟೆಕ್‌ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್‌ ಇದೆ. ಈ ಭಾಗದಲ್ಲಿ ದೇಶದ ಏರ್‌ಕ್ರಾಫ್ಟ್‌ ಮತ್ತು ಸ್ಪೇಸ್‌ಕ್ರಾಫ್ಟ್‌ ವಲಯದ ಶೇಕಡ 25ರಷ್ಟು ತಯಾರಿಕೆ ನಡೆಯುತ್ತಿದೆ. ವಿಮಾನ ಮತ್ತು ಹೆಲಿಕಾಪ್ಟರ್‌ ತಯಾರಿಕೆಯಲ್ಲಿ ರಾಜ್ಯದ ಕೊಡುಗೆ ಶೇ.67ರಷ್ಟಿದೆ. ಇವೆಲ್ಲವನ್ನೂ ಪರಿಗಣಿಸಿ, ಎರಡು ಡಿಫೆನ್ಸ್‌ ಕಾರಿಡಾರ್‌ಗಳನ್ನು ಮಂಜೂರು ಮಾಡಬೇಕೆಂದು ನಿಯೋಗವು ಒತ್ತಾಯಿಸಿದೆ ಎಂದರು.

ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಹಾಗೂ ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್ ಸೇರಿದಂತೆ ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಸರ್ಕಾರದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ನಾಳೆ ರಾಹುಲ್ ಗಾಂಧಿಯವರು ಸಮಯ ನೀಡಿದರೆ ಭೇಟಿಯಾಗುತ್ತೇನೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ನಾಳೆ ನವದೆಹಲಿಗೆ ಆಗಮಿಸಲಿದ್ದು, ಅವರೊಂದಿಗೆ ವಿಧಾನಪರಿಷತ್ ಸದಸ್ಯರು ಹಾಗೂ ನಿಗಮ – ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಬಗ್ಗೆ ಚರ್ಚಿಸಲಾಗುವುದು. ಅಂತೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಗೆ ಸಮಯವನ್ನು ಕೋರಲಾಗಿದ್ದು, ನಾಳೆ ಭೇಟಿಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

ನಿಯೋಗದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಇಂಧನ ಸಚಿವ ಕೆ ಜೆ ಜಾರ್ಜ್‌, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಇದ್ದರು.

Ramesh Babu

Journalist

Recent Posts

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

2 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

14 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

14 hours ago

ದೊಡ್ಡಬಳ್ಳಾಪುರ ರೈಲ್ವೆ ಸ್ಟೇಷನ್ ಬಳಿ ಅಂಡರ್ ಪಾಸ್ ಅವೈಜ್ಞಾನಿಕ- ಮೇಲ್ಸೇತುವೆ ಅಗತ್ಯ- ಸಂಸದ ಡಾ. ಕೆ. ಸುಧಾಕರ್

ಕೇಂದ್ರ ಸರಕಾರದ ಜನಪರ ಯೋಜನೆಗಳನ್ನು ಕಾಲಮಿತಿಯೊಳಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯಗಳು ತಲುಪುವಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ…

15 hours ago

ಮುಂದಿನ ದಿನಗಳಲ್ಲಿ 1000 ಸಬ್ ಇನ್ಸ್ ಪೆಕ್ಟರ್, 8000 ಕಾನ್ಸ್ಟೇಬಲ್ ಗಳ ನೇಮಕ – ಗೃಹ ಸಚಿವ ಪರಮೇಶ್ವರ್

  ಪೊಲೀಸ್ ಇಲಾಖೆಯಲ್ಲಿ 1000 ಸಬ್ ಇನ್ಸ್ಪೆಕ್ಟರ್ ಹಾಗೂ 8000 ಕಾನ್ಸ್ಟೇಬಲ್ ಗಳನ್ನು ಆದಷ್ಟು ಶೀಘ್ರ ನೇಮಕ ಮಾಡಲಾಗುವುದು ಎಂದು…

15 hours ago

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ

ಇಂದು ಮಧ್ಯಾಹ್ನ 3.00 ಗಂಟೆಗೆ 2026ರ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

18 hours ago