ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ ಕೋಟೆ, ಕುಂದಾಣ ಬೆಟ್ಟ, ಶ್ರೀ ಕೋಟೆ ವೇಣುಗೋಪಾಲಸ್ವಾಮಿ ದೇವಸ್ಥಾನ, ಆವತಿ ಬೆಟ್ಟ, ಶ್ರೀ ತಿಮ್ಮರಾಯಸ್ವಾಮಿ ದೇವಸ್ಥಾನ, ಆವತಿ ಕೆರೆ, ಶಿರಡಿ ಸಾಯಿ ಬಾಬಾ ದೇವಾಲಯ, ವೃಕ್ಷೋದ್ಯಾನ ಟ್ರೀ ಪಾರ್ಕ್, ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ.
ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಚಿಕ್ಕ ಮಧುರೆ, ಮಾಕಳಿ ದುರ್ಗ ಬೆಟ್ಟ, ಹುಲ್ಲುಕುಡಿ ಬೆಟ್ಟ.
ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶಿವಗಂಗೆ ಬೆಟ್ಟ, ನಿಜಗಲ್ ಸಿದ್ದರಬೆಟ್ಟ, ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ, ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ-ದೇವರ ಹೊಸಹಳ್ಳಿ, ಮಣ್ಣೇ(ಮಾನ್ಯಪುರ), ಶ್ರೀ ರಾಮಲಿಂಗೇಶ್ವರ ದೇವಸ್ಥಾನ-ಬರದಿ ಬೆಟ್ಟ.
ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೊಸಕೋಟೆ ಕೆರೆ(ದೊಡ್ಡ ಅಮಾನಿಕೆರೆ), ಧರ್ಮೇಶ್ವರ್ ದೇವಸ್ಥಾನ-ಕೊಂಡ್ರಹಳ್ಳಿ, ಕಾಲಭೈರವೇಶ್ವರ ದೇವಸ್ಥಾನ ಜಡಿಗೇನಹಳ್ಳಿ. ಕಾಲಕುಂಟೆ ರಂಗನಾಥ ಸ್ವಾಮಿ ದೇವಸ್ಥಾನ. ಸಪ್ತಮಾತೆಯ ದೇವಸ್ಥಾನ-ಜಡಿಗೆನಹಳ್ಳಿ ಈ ಸ್ಥಳಗಳನ್ನು ಜಿಲ್ಲೆಯ ಪ್ರಮುಖ 25 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…
ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…
ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…
2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್ ಪೀಠವು 9 ಪೊಲೀಸ್ ಸಿಬ್ಬಂದಿಗೆ…
ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…
ಆಟೋ ಎಲ್ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…