ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ ಕೋಟೆ, ಕುಂದಾಣ ಬೆಟ್ಟ, ಶ್ರೀ ಕೋಟೆ ವೇಣುಗೋಪಾಲಸ್ವಾಮಿ ದೇವಸ್ಥಾನ, ಆವತಿ ಬೆಟ್ಟ, ಶ್ರೀ ತಿಮ್ಮರಾಯಸ್ವಾಮಿ ದೇವಸ್ಥಾನ, ಆವತಿ ಕೆರೆ, ಶಿರಡಿ ಸಾಯಿ ಬಾಬಾ ದೇವಾಲಯ, ವೃಕ್ಷೋದ್ಯಾನ ಟ್ರೀ ಪಾರ್ಕ್, ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ.
ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಚಿಕ್ಕ ಮಧುರೆ, ಮಾಕಳಿ ದುರ್ಗ ಬೆಟ್ಟ, ಹುಲ್ಲುಕುಡಿ ಬೆಟ್ಟ.
ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶಿವಗಂಗೆ ಬೆಟ್ಟ, ನಿಜಗಲ್ ಸಿದ್ದರಬೆಟ್ಟ, ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ, ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ-ದೇವರ ಹೊಸಹಳ್ಳಿ, ಮಣ್ಣೇ(ಮಾನ್ಯಪುರ), ಶ್ರೀ ರಾಮಲಿಂಗೇಶ್ವರ ದೇವಸ್ಥಾನ-ಬರದಿ ಬೆಟ್ಟ.
ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೊಸಕೋಟೆ ಕೆರೆ(ದೊಡ್ಡ ಅಮಾನಿಕೆರೆ), ಧರ್ಮೇಶ್ವರ್ ದೇವಸ್ಥಾನ-ಕೊಂಡ್ರಹಳ್ಳಿ, ಕಾಲಭೈರವೇಶ್ವರ ದೇವಸ್ಥಾನ ಜಡಿಗೇನಹಳ್ಳಿ. ಕಾಲಕುಂಟೆ ರಂಗನಾಥ ಸ್ವಾಮಿ ದೇವಸ್ಥಾನ. ಸಪ್ತಮಾತೆಯ ದೇವಸ್ಥಾನ-ಜಡಿಗೆನಹಳ್ಳಿ ಈ ಸ್ಥಳಗಳನ್ನು ಜಿಲ್ಲೆಯ ಪ್ರಮುಖ 25 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ಪರವಾನಗಿ ಭೂ ಮಾಪಕರು ಎರಡು ತಿಂಗಳಿಂದ ಮುಷ್ಕರ ಹೂಡಿರುವುದರಿಂದ ಭೂ ಮಾಪನ ಇಲಾಖೆಯ…
ಕೇಂದ್ರ ಸರ್ಕಾರ ಕಳೆದ ಒಂದು ದಶಕದಿಂದ ವಿವಿಧ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಒಂದೊಂದೆ ಹೆಜ್ಜೆ ಇಟ್ಟುಕೊಂಡು ಬರುತ್ತಿದೆ ಎಂದು…
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…