ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ ಕೋಟೆ, ಕುಂದಾಣ ಬೆಟ್ಟ, ಶ್ರೀ ಕೋಟೆ ವೇಣುಗೋಪಾಲಸ್ವಾಮಿ ದೇವಸ್ಥಾನ, ಆವತಿ ಬೆಟ್ಟ, ಶ್ರೀ ತಿಮ್ಮರಾಯಸ್ವಾಮಿ ದೇವಸ್ಥಾನ, ಆವತಿ ಕೆರೆ, ಶಿರಡಿ ಸಾಯಿ ಬಾಬಾ ದೇವಾಲಯ, ವೃಕ್ಷೋದ್ಯಾನ ಟ್ರೀ ಪಾರ್ಕ್, ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ.

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಚಿಕ್ಕ ಮಧುರೆ, ಮಾಕಳಿ ದುರ್ಗ ಬೆಟ್ಟ, ಹುಲ್ಲುಕುಡಿ ಬೆಟ್ಟ.

ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶಿವಗಂಗೆ ಬೆಟ್ಟ, ನಿಜಗಲ್ ಸಿದ್ದರಬೆಟ್ಟ, ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ, ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ-ದೇವರ ಹೊಸಹಳ್ಳಿ, ಮಣ್ಣೇ(ಮಾನ್ಯಪುರ), ಶ್ರೀ ರಾಮಲಿಂಗೇಶ್ವರ ದೇವಸ್ಥಾನ-ಬರದಿ ಬೆಟ್ಟ.

ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೊಸಕೋಟೆ ಕೆರೆ(ದೊಡ್ಡ ಅಮಾನಿಕೆರೆ), ಧರ್ಮೇಶ್ವರ್ ದೇವಸ್ಥಾನ-ಕೊಂಡ್ರಹಳ್ಳಿ, ಕಾಲಭೈರವೇಶ್ವರ ದೇವಸ್ಥಾನ ಜಡಿಗೇನಹಳ್ಳಿ. ಕಾಲಕುಂಟೆ ರಂಗನಾಥ ಸ್ವಾಮಿ ದೇವಸ್ಥಾನ. ಸಪ್ತಮಾತೆಯ ದೇವಸ್ಥಾನ-ಜಡಿಗೆನಹಳ್ಳಿ ಈ ಸ್ಥಳಗಳನ್ನು ಜಿಲ್ಲೆಯ ಪ್ರಮುಖ 25 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

6 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

9 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

11 hours ago

ಉಚಿತ ಆರೋಗ್ಯ ತಪಾಸಣಾ ಶಿಬಿರ

ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್‌ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…

11 hours ago

ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್-ಬಿಜೆಪಿ ಮಧ್ಯೆ ಘರ್ಷಣೆ ಜೋರು….ಮಾತು ತಪ್ಪಿದ ಶಾಸಕ ಎಂದ ಜೆಡಿಎಸ್ ನಾಯಕರು- ನಾನು ಮಾತು ತಪ್ಪಿಲ್ಲ, ಕೊಟ್ಟ ಮಾತಿನಂತೆ ನಡೆಯುತ್ತೇನೆ – ಶಾಸಕ ಧೀರಜ್ ಮುನಿರಾಜು

ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…

18 hours ago

ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು…..

ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…

19 hours ago