ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 25 ಪ್ರವಾಸಿ ತಾಣಗಳು ಗುರುತು

ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25 ಪ್ರವಾಸಿ ತಾಣಗಳನ್ನು ಕರ್ನಾಟಕ ಪ್ರವಾಸೋದ್ಯಮ ನೀತಿ 2024-25 ರಡಿ ಸರ್ಕಾರ ಅನುಮೋದನೆ ನೀಡಿ ಆದೇಶಿಸಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರವಾಸಿ ತಾಣಗಳ ಪಟ್ಟಿ ನೋಡುವುದಾದರೆ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ದೇವನಹಳ್ಳಿ ಕೋಟೆ, ಕುಂದಾಣ ಬೆಟ್ಟ, ಶ್ರೀ ಕೋಟೆ ವೇಣುಗೋಪಾಲಸ್ವಾಮಿ ದೇವಸ್ಥಾನ, ಆವತಿ ಬೆಟ್ಟ, ಶ್ರೀ ತಿಮ್ಮರಾಯಸ್ವಾಮಿ ದೇವಸ್ಥಾನ, ಆವತಿ ಕೆರೆ, ಶಿರಡಿ ಸಾಯಿ ಬಾಬಾ ದೇವಾಲಯ, ವೃಕ್ಷೋದ್ಯಾನ ಟ್ರೀ ಪಾರ್ಕ್, ಕೆಂಪೇಗೌಡ ಅಂತರಾಷ್ಟ್ರೀಯ ನಿಲ್ದಾಣ.

ದೊಡ್ಡಬಳ್ಳಾಪುರ ತಾಲೂಕು ವ್ಯಾಪ್ತಿಯಲ್ಲಿ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ, ಚಿಕ್ಕ ಮಧುರೆ, ಮಾಕಳಿ ದುರ್ಗ ಬೆಟ್ಟ, ಹುಲ್ಲುಕುಡಿ ಬೆಟ್ಟ.

ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಶಿವಗಂಗೆ ಬೆಟ್ಟ, ನಿಜಗಲ್ ಸಿದ್ದರಬೆಟ್ಟ, ಉದ್ದಾನ ವೀರಭದ್ರ ಸ್ವಾಮಿ ದೇವಸ್ಥಾನ, ಮಹಿಮಾ ರಂಗನಾಥ ಸ್ವಾಮಿ ದೇವಸ್ಥಾನ, ವೀರಭದ್ರ ಸ್ವಾಮಿ ದೇವಸ್ಥಾನ-ದೇವರ ಹೊಸಹಳ್ಳಿ, ಮಣ್ಣೇ(ಮಾನ್ಯಪುರ), ಶ್ರೀ ರಾಮಲಿಂಗೇಶ್ವರ ದೇವಸ್ಥಾನ-ಬರದಿ ಬೆಟ್ಟ.

ಹೊಸಕೋಟೆ ತಾಲೂಕು ವ್ಯಾಪ್ತಿಯಲ್ಲಿ ಹೊಸಕೋಟೆ ಕೆರೆ(ದೊಡ್ಡ ಅಮಾನಿಕೆರೆ), ಧರ್ಮೇಶ್ವರ್ ದೇವಸ್ಥಾನ-ಕೊಂಡ್ರಹಳ್ಳಿ, ಕಾಲಭೈರವೇಶ್ವರ ದೇವಸ್ಥಾನ ಜಡಿಗೇನಹಳ್ಳಿ. ಕಾಲಕುಂಟೆ ರಂಗನಾಥ ಸ್ವಾಮಿ ದೇವಸ್ಥಾನ. ಸಪ್ತಮಾತೆಯ ದೇವಸ್ಥಾನ-ಜಡಿಗೆನಹಳ್ಳಿ ಈ ಸ್ಥಳಗಳನ್ನು ಜಿಲ್ಲೆಯ ಪ್ರಮುಖ 25 ಪ್ರವಾಸಿ ತಾಣಗಳಾಗಿ ಗುರುತಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

9 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

20 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

20 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago

ರಕ್ತ ಸಿಕ್ತ ದೆಹಲಿ… ಇದು ಒಳ್ಳೆಯ ಬೆಳವಣಿಗೆಯಲ್ಲ….

ರಕ್ತ ಸಿಕ್ತ ದೆಹಲಿ...... ಇದು ಒಳ್ಳೆಯ ಬೆಳವಣಿಗೆಯಲ್ಲ.... ದೆಹಲಿ ವಿದ್ಯಾರ್ಥಿಗಳ ಪ್ರತಿಭಟನೆ ಲಾಟಿಚಾರ್ಜ್ ಹಂತಕ್ಕೆ ತಲುಪುವ ಮೊದಲೇ ಸರ್ಕಾರ ಒಂದಷ್ಟು…

1 day ago