ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 03 ಎನ್.ಡಿ.ಪಿ.ಎಸ್ ಪ್ರಕರಣ ದಾಖಲು

ಮಾದಕವಸ್ತು ಕಳ್ಳಸಾಗಣೆ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಅಬಕಾರಿ ಇಲಾಖೆ ವತಿಯಿಂದ ವಿವಿಧ ಕಡೆಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸಿ ಒಟ್ಟು 03 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.

3 ಪ್ರಕರಣಗಳಲ್ಲಿ ಒಟ್ಟು 11.357 ಕೆ.ಜಿ ಪ್ರಮಾಣದ ಗಾಂಜಾವನ್ನು ಇಲಾಖಾ ವಶಕ್ಕೆ ಪಡೆಯಲಾಗಿದ್ದು, ಇದರಲ್ಲಿ ಹೊಸಕೋಟೆ ವಲಯದ ಅಬಕಾರಿ ಉಪ ನಿರೀಕ್ಷಕರು ದೊಡ್ಡದುನ್ನಸಂದ್ರದಿಂದ ಅನುಗೊಂಡನಹಳ್ಳಿ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಸುಹೇಲ್ ಅಹಮ್ಮದ್ ಬಿನ್ ಹುಸೇಲ್ ಅಹಮ್ಮದ್ ಎಂಬ ವ್ಯಕ್ತಿ 0.929 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಹಿಡಿದು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ದೊಡ್ಡಬಳ್ಳಾಪುರ ವಲಯದ ಅಬಕಾರಿ ವಲಯದ ನಿರೀಕ್ಷಕರು, ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-04, ಪೋಲ್ ನಂ.ಡಿಬಿಯು-1032 ರ ಬಳಿ 4.14 ಕೆ.ಜಿ ರಷ್ಟು ಗಾಂಜಾವನ್ನು ಸಾಗಾಣಿಕೆ ಮಾಡುವ ಸಮಯದಲ್ಲಿ ಜಪ್ತು ಪಡಿಸಿದ್ದು, ಆರೋಪಿ ಪರಾರಿಯಾಗಿರುತ್ತಾನೆ, ತನಿಖೆ ಪ್ರಗತಿಯಲ್ಲಿದೆ.

ಉಳಿದಂತೆ ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು, ದೇವನಹಳ್ಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-01 ರಲ್ಲಿ 6.288 ಕೆ.ಜಿ ರಷ್ಟು ಗಾಂಜಾವನ್ನು ಚೀಲದಲ್ಲಿ ಸಾಗಾಣಿಕೆ ಮಾಡುವ ಸಮಯದಲ್ಲಿ ಹಿಡಿದಿರುತ್ತಾರೆ. ಆರೋಪಿ ಪರಾರಿಯಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

41 minutes ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

1 hour ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

13 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago