ಮಾದಕವಸ್ತು ಕಳ್ಳಸಾಗಣೆ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಅಬಕಾರಿ ಇಲಾಖೆ ವತಿಯಿಂದ ವಿವಿಧ ಕಡೆಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸಿ ಒಟ್ಟು 03 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.
3 ಪ್ರಕರಣಗಳಲ್ಲಿ ಒಟ್ಟು 11.357 ಕೆ.ಜಿ ಪ್ರಮಾಣದ ಗಾಂಜಾವನ್ನು ಇಲಾಖಾ ವಶಕ್ಕೆ ಪಡೆಯಲಾಗಿದ್ದು, ಇದರಲ್ಲಿ ಹೊಸಕೋಟೆ ವಲಯದ ಅಬಕಾರಿ ಉಪ ನಿರೀಕ್ಷಕರು ದೊಡ್ಡದುನ್ನಸಂದ್ರದಿಂದ ಅನುಗೊಂಡನಹಳ್ಳಿ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಸುಹೇಲ್ ಅಹಮ್ಮದ್ ಬಿನ್ ಹುಸೇಲ್ ಅಹಮ್ಮದ್ ಎಂಬ ವ್ಯಕ್ತಿ 0.929 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಹಿಡಿದು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ವಲಯದ ಅಬಕಾರಿ ವಲಯದ ನಿರೀಕ್ಷಕರು, ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-04, ಪೋಲ್ ನಂ.ಡಿಬಿಯು-1032 ರ ಬಳಿ 4.14 ಕೆ.ಜಿ ರಷ್ಟು ಗಾಂಜಾವನ್ನು ಸಾಗಾಣಿಕೆ ಮಾಡುವ ಸಮಯದಲ್ಲಿ ಜಪ್ತು ಪಡಿಸಿದ್ದು, ಆರೋಪಿ ಪರಾರಿಯಾಗಿರುತ್ತಾನೆ, ತನಿಖೆ ಪ್ರಗತಿಯಲ್ಲಿದೆ.
ಉಳಿದಂತೆ ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು, ದೇವನಹಳ್ಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-01 ರಲ್ಲಿ 6.288 ಕೆ.ಜಿ ರಷ್ಟು ಗಾಂಜಾವನ್ನು ಚೀಲದಲ್ಲಿ ಸಾಗಾಣಿಕೆ ಮಾಡುವ ಸಮಯದಲ್ಲಿ ಹಿಡಿದಿರುತ್ತಾರೆ. ಆರೋಪಿ ಪರಾರಿಯಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…