ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 03 ಎನ್.ಡಿ.ಪಿ.ಎಸ್ ಪ್ರಕರಣ ದಾಖಲು

ಮಾದಕವಸ್ತು ಕಳ್ಳಸಾಗಣೆ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಅಬಕಾರಿ ಇಲಾಖೆ ವತಿಯಿಂದ ವಿವಿಧ ಕಡೆಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸಿ ಒಟ್ಟು 03 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.

3 ಪ್ರಕರಣಗಳಲ್ಲಿ ಒಟ್ಟು 11.357 ಕೆ.ಜಿ ಪ್ರಮಾಣದ ಗಾಂಜಾವನ್ನು ಇಲಾಖಾ ವಶಕ್ಕೆ ಪಡೆಯಲಾಗಿದ್ದು, ಇದರಲ್ಲಿ ಹೊಸಕೋಟೆ ವಲಯದ ಅಬಕಾರಿ ಉಪ ನಿರೀಕ್ಷಕರು ದೊಡ್ಡದುನ್ನಸಂದ್ರದಿಂದ ಅನುಗೊಂಡನಹಳ್ಳಿ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಸುಹೇಲ್ ಅಹಮ್ಮದ್ ಬಿನ್ ಹುಸೇಲ್ ಅಹಮ್ಮದ್ ಎಂಬ ವ್ಯಕ್ತಿ 0.929 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಹಿಡಿದು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.

ದೊಡ್ಡಬಳ್ಳಾಪುರ ವಲಯದ ಅಬಕಾರಿ ವಲಯದ ನಿರೀಕ್ಷಕರು, ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-04, ಪೋಲ್ ನಂ.ಡಿಬಿಯು-1032 ರ ಬಳಿ 4.14 ಕೆ.ಜಿ ರಷ್ಟು ಗಾಂಜಾವನ್ನು ಸಾಗಾಣಿಕೆ ಮಾಡುವ ಸಮಯದಲ್ಲಿ ಜಪ್ತು ಪಡಿಸಿದ್ದು, ಆರೋಪಿ ಪರಾರಿಯಾಗಿರುತ್ತಾನೆ, ತನಿಖೆ ಪ್ರಗತಿಯಲ್ಲಿದೆ.

ಉಳಿದಂತೆ ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು, ದೇವನಹಳ್ಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-01 ರಲ್ಲಿ 6.288 ಕೆ.ಜಿ ರಷ್ಟು ಗಾಂಜಾವನ್ನು ಚೀಲದಲ್ಲಿ ಸಾಗಾಣಿಕೆ ಮಾಡುವ ಸಮಯದಲ್ಲಿ ಹಿಡಿದಿರುತ್ತಾರೆ. ಆರೋಪಿ ಪರಾರಿಯಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

11 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

11 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

11 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

19 hours ago

ಲಾರಿ-ಕ್ರೂಸರ್ ನಡುವೆ ಭೀಕರ ಅಪಘಾತ; ಗೋಕರ್ಣಕ್ಕೆ ತೆರಳುತ್ತಿದ್ದ 6 ಮಂದಿ ಸಾವು: ಹಲವರಿಗೆ ಗಾಯ

ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ…

22 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡರಿಗೆ ಹುಟ್ಟುಹಬ್ಬದ ಸಂಭ್ರಮ: ರೋಗಿಗಳಿಗೆ ಹಾಲು, ಹಣ್ಣು, ಬ್ರೆಡ್ ವಿತರಣೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಚುಂಚೇಗೌಡ ಅವರ ಹುಟ್ಟುಹಬ್ಬದ ಪ್ರಯುಕ್ತ MMS ಗ್ರೂಪ್ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು. ಹುಟ್ಟುಹಬ್ಬ…

1 day ago