ಮಾದಕವಸ್ತು ಕಳ್ಳಸಾಗಣೆ ವಿರುದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ಅಬಕಾರಿ ಇಲಾಖೆ ವತಿಯಿಂದ ವಿವಿಧ ಕಡೆಗಳಲ್ಲಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ನಡೆಸಿ ಒಟ್ಟು 03 ಎನ್.ಡಿ.ಪಿ.ಎಸ್ ಪ್ರಕರಣಗಳನ್ನು ದಾಖಲಿಸಲಾಗಿದೆ.
3 ಪ್ರಕರಣಗಳಲ್ಲಿ ಒಟ್ಟು 11.357 ಕೆ.ಜಿ ಪ್ರಮಾಣದ ಗಾಂಜಾವನ್ನು ಇಲಾಖಾ ವಶಕ್ಕೆ ಪಡೆಯಲಾಗಿದ್ದು, ಇದರಲ್ಲಿ ಹೊಸಕೋಟೆ ವಲಯದ ಅಬಕಾರಿ ಉಪ ನಿರೀಕ್ಷಕರು ದೊಡ್ಡದುನ್ನಸಂದ್ರದಿಂದ ಅನುಗೊಂಡನಹಳ್ಳಿ ಕಡೆಗೆ ಹೋಗುವ ರಸ್ತೆ ಬದಿಯಲ್ಲಿ ಸುಹೇಲ್ ಅಹಮ್ಮದ್ ಬಿನ್ ಹುಸೇಲ್ ಅಹಮ್ಮದ್ ಎಂಬ ವ್ಯಕ್ತಿ 0.929 ಕೆ.ಜಿ. ಗಾಂಜಾವನ್ನು ಸಾಗಿಸುತ್ತಿದ್ದಾಗ ಆರೋಪಿಯನ್ನು ಹಿಡಿದು ಬಂಧಿಸಲಾಗಿದ್ದು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
ದೊಡ್ಡಬಳ್ಳಾಪುರ ವಲಯದ ಅಬಕಾರಿ ವಲಯದ ನಿರೀಕ್ಷಕರು, ದೊಡ್ಡಬಳ್ಳಾಪುರ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-04, ಪೋಲ್ ನಂ.ಡಿಬಿಯು-1032 ರ ಬಳಿ 4.14 ಕೆ.ಜಿ ರಷ್ಟು ಗಾಂಜಾವನ್ನು ಸಾಗಾಣಿಕೆ ಮಾಡುವ ಸಮಯದಲ್ಲಿ ಜಪ್ತು ಪಡಿಸಿದ್ದು, ಆರೋಪಿ ಪರಾರಿಯಾಗಿರುತ್ತಾನೆ, ತನಿಖೆ ಪ್ರಗತಿಯಲ್ಲಿದೆ.
ಉಳಿದಂತೆ ಹೊಸಕೋಟೆ ಉಪ ವಿಭಾಗದ ಅಬಕಾರಿ ಉಪ ನಿರೀಕ್ಷಕರು, ದೇವನಹಳ್ಳಿ ರೈಲ್ವೆ ನಿಲ್ದಾಣದ ಫ್ಲಾಟ್ ಫಾರಂ ನಂ-01 ರಲ್ಲಿ 6.288 ಕೆ.ಜಿ ರಷ್ಟು ಗಾಂಜಾವನ್ನು ಚೀಲದಲ್ಲಿ ಸಾಗಾಣಿಕೆ ಮಾಡುವ ಸಮಯದಲ್ಲಿ ಹಿಡಿದಿರುತ್ತಾರೆ. ಆರೋಪಿ ಪರಾರಿಯಾಗಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…