ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ

ಫೆ.26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದರು.

ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.

ಚರ್ಚೆಗೆ ಗ್ರಾಸವಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ

ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿರುವುದು ಹಾಗೂ ತೆರವಾದ ಜಾಗಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಿರುವುದಕ್ಕೆ ಕೆಲವೊಂದು ಆಕ್ಷೇಪಗಳು ಹಾಗೂ ಸಮರ್ಥನೆಗಳು ಸಾರ್ವಜನಿಕ‌ ವಲಯದಲ್ಲಿ ಕೇಳಿಬರುತ್ತಿವೆ…

ವಿರೋಧ

* ನಿಷ್ಠಾವಂತರಿಗೆ ಈ ಸರ್ಕಾರದಲ್ಲಿ ಕಾಲ ಬರುವುದು ಕಷ್ಟ. ಈ ಸರ್ಕಾರಕ್ಕೆ ತಕ್ಕಂತೆ, ಅವರು ಹೇಳಿದ ಹಾಗೆ ಕೇಳಿಕೊಂಡು, ಇವರಿಗೆ ಮಾಡುವ ಭ್ರಷ್ಟಾಚಾರಗಳಿಗೆ ಬೆಂಬಲಕ್ಕೆ ನಿಂತುಕೊಂಡರೆ ಆಗ ಇಂತಹ ಇಂದು ಅಧಿಕಾರಿಗಳಿಗೆ ಬೆಂಬಲ ಕೊಡುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ…

* ಉಸ್ತುವಾರಿ ಮಂತ್ರಿಗಳ ಪಿಎ ಅವರ ಅನುಕೂಲಕ್ಕಾಗಿ ಅವರ ಸಂಬಂಧಿಕರನ್ನೇ ಜಿಲ್ಲಾಧಿಕಾರಿಗಳಾಗಿ ಮಾಡಿಸಿಕೊಂಡಿದ್ದಾರೆ, ಇದು ರಾಜಕೀಯ ಪ್ರೇರಿತ ವರ್ಗಾವಣೆ ಮಾನ್ಯ ಬಸವರಾಜ್ ರವರು ಬಡವರ ಪರ ನ್ಯಾಯ ನೀತಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕೈಗೊಂಡ ನಿಷ್ಠಾವಂತ ಅಧಿಕಾರಿ, ಅಕ್ರಮ ಗಣಿಗಾರಿಕೆಗೆ ಸಪೋರ್ಟ್ ಮಾಡಲಿಲ್ಲವೆಂದು ಮಾನ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಯಲ್ಲಿ ಇದು ಒಂದು ಎಂದು ಕಿಡಿಕಾರಿದ್ದಾರೆ..

* ಬಸವರಾಜ್ ಸಾರ್. ಮೊನ್ನೇ ಮೋನ್ನೇ ಬಂದಿದ್ದು. ಈಸ್ಟ್ ಬೇಗ ವರ್ಗಾ ವಾಗಿದೆ. ಕಾರಣ ಕೋಡಿ… ಎಂದು ಪ್ರಶ್ನೆ ಮಾಡಲಾಗಿದೆ..

* ತನ್ನ ಅಧೀನದಲ್ಲಿ ಇರುವ ಅಧಿಕಾರಿಗಳನ್ನು ತನ್ನ ಆತೋಟಿಯಲ್ಲಿ ಇಟ್ಟು ಭ್ರಷ್ಟಾಚಾರ ಕಡಿವಾಣ ಹಾಕದೆ ಕಂಡು ಕಾಣದ ಹಾಗೆ ಇರುವ ಅಧಿಕಾರಿ ನಿಷ್ಠಾವಂತರ  ಯಾಕೆ ಬೇರೆ ಯಾರೂ ಅದರಲ್ಲೂ ಒಬ್ಬ ಹೆಣ್ಣು ಮಗಳು ಜಿಲ್ಲಾಧಿಕಾರಿ ಆಗಿದ್ದು ಸರಿ ಅನಿಸುತ್ತಿಲ್ಲವಾ ಎಂದು ಪ್ರಶ್ನಿಸಲಾಗಿದೆ…

* ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಶ್ರೀ ಎ.ಬಿ. ಬಸವರಾಜು ಅವರ ವರ್ಗಾವಣೆ ಜಿಲ್ಲೆಯ ಜನತೆಗೆ ನಿಜಕ್ಕೂ ಬೇಸರದ ಸಂಗತಿ.

ಅವರು ಕೇವಲ ಅಧಿಕಾರಿಯಾಗಿ ಮಾತ್ರವಲ್ಲ, ಜನರ ನಡುವೆ ಬೆರೆತು ಕೆಲಸ ಮಾಡಿದ ಒಬ್ಬ ಜನಪರ ಆಡಳಿತಗಾರರಾಗಿದ್ದರು. ಸಾಮಾನ್ಯ ಜನರ ಅಹವಾಲುಗಳನ್ನು ಶ್ರದ್ಧೆಯಿಂದ ಆಲಿಸಿ, ಸರಳತೆ ಮತ್ತು ದೃಢತೆಯೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದವರು.

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಜಾನುವಾರು ಜಾತ್ರೆಗೆ ವಿಶೇಷ ಕಾಳಜಿ ವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನೀಲನಕ್ಷೆ ರೂಪಿಸಿದರು. ಸುಂಕ ರಹಿತ ಜಾತ್ರೆಯನ್ನು ಜಾರಿಗೊಳಿಸಿ, ರೈತರಿಗೆ ನೇರವಾಗಿ ಅನುಕೂಲವಾಗುವಂತೆ ಕ್ರಮ ಕೈಗೊಂಡದ್ದು ಅವರ ಜನಪರ ಮನೋಭಾವದ ಪ್ರತಿಬಿಂಬವಾಗಿದೆ.

ಸರ್ಕಾರಿ ಭೂಮಿಯನ್ನು ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಭೂಗಳ್ಳರಿಗೆ ಸಿಂಹಸ್ವಪ್ನರಾಗಿದ್ದರು. “ಸರ್ಕಾರಿ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಎಂಬ ಧ್ಯೇಯದೊಂದಿಗೆ ಶಿಕ್ಷಣ ಕ್ಷೇತ್ರಕ್ಕೂ ಹೊಸ ಚೈತನ್ಯ ತುಂಬಿದರು. ತೂಬಗೆರೆ ಹಲಸಿಗೆ ಬ್ರಾಂಡ್ ಪೇಟೆಂಟ್ ಪಡೆಯುವ ಪ್ರಯತ್ನಗಳ ಮೂಲಕ ಸ್ಥಳೀಯ ಉತ್ಪನ್ನಕ್ಕೆ ಗುರುತಿನ ಮುದ್ರೆ ಒದಗಿಸಲು ಮುಂದಾದರು.

ಯುವಕರೊಂದಿಗೆ ಚಾರಣ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಆಡಳಿತ ಮತ್ತು ಯುವಶಕ್ತಿಯ ನಡುವೆ ಸೇತುವೆ ನಿರ್ಮಿಸಿದ ಅಧಿಕಾರಿಯಾಗಿದ್ದರು.

ಇಂತಹ ಪ್ರಾಮಾಣಿಕ, ದಕ್ಷ ಮತ್ತು ಹೃದಯವಂತ ಅಧಿಕಾರಿಯನ್ನು ಪಡೆದ ನಾವು ಭಾಗ್ಯವಂತರು. ಅವರು ಇನ್ನೂ ಹೆಚ್ಚಿನ ಕಾಲ ನಮ್ಮ ಜಿಲ್ಲೆಯಲ್ಲೇ ಸೇವೆ ಸಲ್ಲಿಸಬೇಕೆಂಬುದು ಜನಮನದ ಆಶೆಯಾಗಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ…

Ramesh Babu

Journalist

Recent Posts

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

3 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

7 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

15 hours ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

17 hours ago

ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…

20 hours ago

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪ.ಪಂ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರಿಂದ ಹಲ್ಲೆ: ದೂರು ದಾಖಲು

ಸೆಲೂನ್ ನಲ್ಲಿ ಯುವಕನ‌ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ‌ಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…

21 hours ago