ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ

ಫೆ.26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದರು.

ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.

ಚರ್ಚೆಗೆ ಗ್ರಾಸವಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ

ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿರುವುದು ಹಾಗೂ ತೆರವಾದ ಜಾಗಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಿರುವುದಕ್ಕೆ ಕೆಲವೊಂದು ಆಕ್ಷೇಪಗಳು ಹಾಗೂ ಸಮರ್ಥನೆಗಳು ಸಾರ್ವಜನಿಕ‌ ವಲಯದಲ್ಲಿ ಕೇಳಿಬರುತ್ತಿವೆ…

ವಿರೋಧ

* ನಿಷ್ಠಾವಂತರಿಗೆ ಈ ಸರ್ಕಾರದಲ್ಲಿ ಕಾಲ ಬರುವುದು ಕಷ್ಟ. ಈ ಸರ್ಕಾರಕ್ಕೆ ತಕ್ಕಂತೆ, ಅವರು ಹೇಳಿದ ಹಾಗೆ ಕೇಳಿಕೊಂಡು, ಇವರಿಗೆ ಮಾಡುವ ಭ್ರಷ್ಟಾಚಾರಗಳಿಗೆ ಬೆಂಬಲಕ್ಕೆ ನಿಂತುಕೊಂಡರೆ ಆಗ ಇಂತಹ ಇಂದು ಅಧಿಕಾರಿಗಳಿಗೆ ಬೆಂಬಲ ಕೊಡುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ…

* ಉಸ್ತುವಾರಿ ಮಂತ್ರಿಗಳ ಪಿಎ ಅವರ ಅನುಕೂಲಕ್ಕಾಗಿ ಅವರ ಸಂಬಂಧಿಕರನ್ನೇ ಜಿಲ್ಲಾಧಿಕಾರಿಗಳಾಗಿ ಮಾಡಿಸಿಕೊಂಡಿದ್ದಾರೆ, ಇದು ರಾಜಕೀಯ ಪ್ರೇರಿತ ವರ್ಗಾವಣೆ ಮಾನ್ಯ ಬಸವರಾಜ್ ರವರು ಬಡವರ ಪರ ನ್ಯಾಯ ನೀತಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕೈಗೊಂಡ ನಿಷ್ಠಾವಂತ ಅಧಿಕಾರಿ, ಅಕ್ರಮ ಗಣಿಗಾರಿಕೆಗೆ ಸಪೋರ್ಟ್ ಮಾಡಲಿಲ್ಲವೆಂದು ಮಾನ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಯಲ್ಲಿ ಇದು ಒಂದು ಎಂದು ಕಿಡಿಕಾರಿದ್ದಾರೆ..

* ಬಸವರಾಜ್ ಸಾರ್. ಮೊನ್ನೇ ಮೋನ್ನೇ ಬಂದಿದ್ದು. ಈಸ್ಟ್ ಬೇಗ ವರ್ಗಾ ವಾಗಿದೆ. ಕಾರಣ ಕೋಡಿ… ಎಂದು ಪ್ರಶ್ನೆ ಮಾಡಲಾಗಿದೆ..

* ತನ್ನ ಅಧೀನದಲ್ಲಿ ಇರುವ ಅಧಿಕಾರಿಗಳನ್ನು ತನ್ನ ಆತೋಟಿಯಲ್ಲಿ ಇಟ್ಟು ಭ್ರಷ್ಟಾಚಾರ ಕಡಿವಾಣ ಹಾಕದೆ ಕಂಡು ಕಾಣದ ಹಾಗೆ ಇರುವ ಅಧಿಕಾರಿ ನಿಷ್ಠಾವಂತರ  ಯಾಕೆ ಬೇರೆ ಯಾರೂ ಅದರಲ್ಲೂ ಒಬ್ಬ ಹೆಣ್ಣು ಮಗಳು ಜಿಲ್ಲಾಧಿಕಾರಿ ಆಗಿದ್ದು ಸರಿ ಅನಿಸುತ್ತಿಲ್ಲವಾ ಎಂದು ಪ್ರಶ್ನಿಸಲಾಗಿದೆ…

* ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಶ್ರೀ ಎ.ಬಿ. ಬಸವರಾಜು ಅವರ ವರ್ಗಾವಣೆ ಜಿಲ್ಲೆಯ ಜನತೆಗೆ ನಿಜಕ್ಕೂ ಬೇಸರದ ಸಂಗತಿ.

ಅವರು ಕೇವಲ ಅಧಿಕಾರಿಯಾಗಿ ಮಾತ್ರವಲ್ಲ, ಜನರ ನಡುವೆ ಬೆರೆತು ಕೆಲಸ ಮಾಡಿದ ಒಬ್ಬ ಜನಪರ ಆಡಳಿತಗಾರರಾಗಿದ್ದರು. ಸಾಮಾನ್ಯ ಜನರ ಅಹವಾಲುಗಳನ್ನು ಶ್ರದ್ಧೆಯಿಂದ ಆಲಿಸಿ, ಸರಳತೆ ಮತ್ತು ದೃಢತೆಯೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದವರು.

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಜಾನುವಾರು ಜಾತ್ರೆಗೆ ವಿಶೇಷ ಕಾಳಜಿ ವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನೀಲನಕ್ಷೆ ರೂಪಿಸಿದರು. ಸುಂಕ ರಹಿತ ಜಾತ್ರೆಯನ್ನು ಜಾರಿಗೊಳಿಸಿ, ರೈತರಿಗೆ ನೇರವಾಗಿ ಅನುಕೂಲವಾಗುವಂತೆ ಕ್ರಮ ಕೈಗೊಂಡದ್ದು ಅವರ ಜನಪರ ಮನೋಭಾವದ ಪ್ರತಿಬಿಂಬವಾಗಿದೆ.

ಸರ್ಕಾರಿ ಭೂಮಿಯನ್ನು ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಭೂಗಳ್ಳರಿಗೆ ಸಿಂಹಸ್ವಪ್ನರಾಗಿದ್ದರು. “ಸರ್ಕಾರಿ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಎಂಬ ಧ್ಯೇಯದೊಂದಿಗೆ ಶಿಕ್ಷಣ ಕ್ಷೇತ್ರಕ್ಕೂ ಹೊಸ ಚೈತನ್ಯ ತುಂಬಿದರು. ತೂಬಗೆರೆ ಹಲಸಿಗೆ ಬ್ರಾಂಡ್ ಪೇಟೆಂಟ್ ಪಡೆಯುವ ಪ್ರಯತ್ನಗಳ ಮೂಲಕ ಸ್ಥಳೀಯ ಉತ್ಪನ್ನಕ್ಕೆ ಗುರುತಿನ ಮುದ್ರೆ ಒದಗಿಸಲು ಮುಂದಾದರು.

ಯುವಕರೊಂದಿಗೆ ಚಾರಣ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಆಡಳಿತ ಮತ್ತು ಯುವಶಕ್ತಿಯ ನಡುವೆ ಸೇತುವೆ ನಿರ್ಮಿಸಿದ ಅಧಿಕಾರಿಯಾಗಿದ್ದರು.

ಇಂತಹ ಪ್ರಾಮಾಣಿಕ, ದಕ್ಷ ಮತ್ತು ಹೃದಯವಂತ ಅಧಿಕಾರಿಯನ್ನು ಪಡೆದ ನಾವು ಭಾಗ್ಯವಂತರು. ಅವರು ಇನ್ನೂ ಹೆಚ್ಚಿನ ಕಾಲ ನಮ್ಮ ಜಿಲ್ಲೆಯಲ್ಲೇ ಸೇವೆ ಸಲ್ಲಿಸಬೇಕೆಂಬುದು ಜನಮನದ ಆಶೆಯಾಗಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ…

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago