ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ

ಫೆ.26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದರು.

ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.

ಚರ್ಚೆಗೆ ಗ್ರಾಸವಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ

ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿರುವುದು ಹಾಗೂ ತೆರವಾದ ಜಾಗಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಿರುವುದಕ್ಕೆ ಕೆಲವೊಂದು ಆಕ್ಷೇಪಗಳು ಹಾಗೂ ಸಮರ್ಥನೆಗಳು ಸಾರ್ವಜನಿಕ‌ ವಲಯದಲ್ಲಿ ಕೇಳಿಬರುತ್ತಿವೆ…

ವಿರೋಧ

* ನಿಷ್ಠಾವಂತರಿಗೆ ಈ ಸರ್ಕಾರದಲ್ಲಿ ಕಾಲ ಬರುವುದು ಕಷ್ಟ. ಈ ಸರ್ಕಾರಕ್ಕೆ ತಕ್ಕಂತೆ, ಅವರು ಹೇಳಿದ ಹಾಗೆ ಕೇಳಿಕೊಂಡು, ಇವರಿಗೆ ಮಾಡುವ ಭ್ರಷ್ಟಾಚಾರಗಳಿಗೆ ಬೆಂಬಲಕ್ಕೆ ನಿಂತುಕೊಂಡರೆ ಆಗ ಇಂತಹ ಇಂದು ಅಧಿಕಾರಿಗಳಿಗೆ ಬೆಂಬಲ ಕೊಡುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ…

* ಉಸ್ತುವಾರಿ ಮಂತ್ರಿಗಳ ಪಿಎ ಅವರ ಅನುಕೂಲಕ್ಕಾಗಿ ಅವರ ಸಂಬಂಧಿಕರನ್ನೇ ಜಿಲ್ಲಾಧಿಕಾರಿಗಳಾಗಿ ಮಾಡಿಸಿಕೊಂಡಿದ್ದಾರೆ, ಇದು ರಾಜಕೀಯ ಪ್ರೇರಿತ ವರ್ಗಾವಣೆ ಮಾನ್ಯ ಬಸವರಾಜ್ ರವರು ಬಡವರ ಪರ ನ್ಯಾಯ ನೀತಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕೈಗೊಂಡ ನಿಷ್ಠಾವಂತ ಅಧಿಕಾರಿ, ಅಕ್ರಮ ಗಣಿಗಾರಿಕೆಗೆ ಸಪೋರ್ಟ್ ಮಾಡಲಿಲ್ಲವೆಂದು ಮಾನ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಯಲ್ಲಿ ಇದು ಒಂದು ಎಂದು ಕಿಡಿಕಾರಿದ್ದಾರೆ..

* ಬಸವರಾಜ್ ಸಾರ್. ಮೊನ್ನೇ ಮೋನ್ನೇ ಬಂದಿದ್ದು. ಈಸ್ಟ್ ಬೇಗ ವರ್ಗಾ ವಾಗಿದೆ. ಕಾರಣ ಕೋಡಿ… ಎಂದು ಪ್ರಶ್ನೆ ಮಾಡಲಾಗಿದೆ..

* ತನ್ನ ಅಧೀನದಲ್ಲಿ ಇರುವ ಅಧಿಕಾರಿಗಳನ್ನು ತನ್ನ ಆತೋಟಿಯಲ್ಲಿ ಇಟ್ಟು ಭ್ರಷ್ಟಾಚಾರ ಕಡಿವಾಣ ಹಾಕದೆ ಕಂಡು ಕಾಣದ ಹಾಗೆ ಇರುವ ಅಧಿಕಾರಿ ನಿಷ್ಠಾವಂತರ  ಯಾಕೆ ಬೇರೆ ಯಾರೂ ಅದರಲ್ಲೂ ಒಬ್ಬ ಹೆಣ್ಣು ಮಗಳು ಜಿಲ್ಲಾಧಿಕಾರಿ ಆಗಿದ್ದು ಸರಿ ಅನಿಸುತ್ತಿಲ್ಲವಾ ಎಂದು ಪ್ರಶ್ನಿಸಲಾಗಿದೆ…

* ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಶ್ರೀ ಎ.ಬಿ. ಬಸವರಾಜು ಅವರ ವರ್ಗಾವಣೆ ಜಿಲ್ಲೆಯ ಜನತೆಗೆ ನಿಜಕ್ಕೂ ಬೇಸರದ ಸಂಗತಿ.

ಅವರು ಕೇವಲ ಅಧಿಕಾರಿಯಾಗಿ ಮಾತ್ರವಲ್ಲ, ಜನರ ನಡುವೆ ಬೆರೆತು ಕೆಲಸ ಮಾಡಿದ ಒಬ್ಬ ಜನಪರ ಆಡಳಿತಗಾರರಾಗಿದ್ದರು. ಸಾಮಾನ್ಯ ಜನರ ಅಹವಾಲುಗಳನ್ನು ಶ್ರದ್ಧೆಯಿಂದ ಆಲಿಸಿ, ಸರಳತೆ ಮತ್ತು ದೃಢತೆಯೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದವರು.

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಜಾನುವಾರು ಜಾತ್ರೆಗೆ ವಿಶೇಷ ಕಾಳಜಿ ವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನೀಲನಕ್ಷೆ ರೂಪಿಸಿದರು. ಸುಂಕ ರಹಿತ ಜಾತ್ರೆಯನ್ನು ಜಾರಿಗೊಳಿಸಿ, ರೈತರಿಗೆ ನೇರವಾಗಿ ಅನುಕೂಲವಾಗುವಂತೆ ಕ್ರಮ ಕೈಗೊಂಡದ್ದು ಅವರ ಜನಪರ ಮನೋಭಾವದ ಪ್ರತಿಬಿಂಬವಾಗಿದೆ.

ಸರ್ಕಾರಿ ಭೂಮಿಯನ್ನು ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಭೂಗಳ್ಳರಿಗೆ ಸಿಂಹಸ್ವಪ್ನರಾಗಿದ್ದರು. “ಸರ್ಕಾರಿ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಎಂಬ ಧ್ಯೇಯದೊಂದಿಗೆ ಶಿಕ್ಷಣ ಕ್ಷೇತ್ರಕ್ಕೂ ಹೊಸ ಚೈತನ್ಯ ತುಂಬಿದರು. ತೂಬಗೆರೆ ಹಲಸಿಗೆ ಬ್ರಾಂಡ್ ಪೇಟೆಂಟ್ ಪಡೆಯುವ ಪ್ರಯತ್ನಗಳ ಮೂಲಕ ಸ್ಥಳೀಯ ಉತ್ಪನ್ನಕ್ಕೆ ಗುರುತಿನ ಮುದ್ರೆ ಒದಗಿಸಲು ಮುಂದಾದರು.

ಯುವಕರೊಂದಿಗೆ ಚಾರಣ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಆಡಳಿತ ಮತ್ತು ಯುವಶಕ್ತಿಯ ನಡುವೆ ಸೇತುವೆ ನಿರ್ಮಿಸಿದ ಅಧಿಕಾರಿಯಾಗಿದ್ದರು.

ಇಂತಹ ಪ್ರಾಮಾಣಿಕ, ದಕ್ಷ ಮತ್ತು ಹೃದಯವಂತ ಅಧಿಕಾರಿಯನ್ನು ಪಡೆದ ನಾವು ಭಾಗ್ಯವಂತರು. ಅವರು ಇನ್ನೂ ಹೆಚ್ಚಿನ ಕಾಲ ನಮ್ಮ ಜಿಲ್ಲೆಯಲ್ಲೇ ಸೇವೆ ಸಲ್ಲಿಸಬೇಕೆಂಬುದು ಜನಮನದ ಆಶೆಯಾಗಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ…

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 hour ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago