ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ: ಸಾರ್ವಜನಿಕ ವಲಯದಲ್ಲಿ ಪರ-ವಿರೋಧ ಚರ್ಚೆ

ಫೆ.26ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ್‌ ಆದೇಶಿಸಿದ್ದರು.

ಎ.ಬಿ. ಬಸವರಾಜು ಅವರ ವರ್ಗಾವಣೆಯಿಂದ ತೆರವಾದ ಜಾಗಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಲಾಗಿದ್ದು, ಜಿಪಂ ಪ್ರಭಾರ ಸಿಇಒ ಆಗಿ ಮುಂದುವರಿಸಲಾಗಿದೆ.

ಚರ್ಚೆಗೆ ಗ್ರಾಸವಾದ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ವರ್ಗಾವಣೆ

ಇದೀಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎ.ಬಿ. ಬಸವರಾಜು ಅವರನ್ನು ವರ್ಗಾವಣೆ ಮಾಡಿರುವುದು ಹಾಗೂ ತೆರವಾದ ಜಾಗಕ್ಕೆ ಜಿಲ್ಲಾ ಪಂಚಾಯಿತಿ ಸಿಇಒ ಆಗಿರುವ ಡಾ. ಅನುರಾಧಾ ಕೆ.ಎನ್. ಅವರನ್ನು ನೇಮಕ ಮಾಡಿರುವುದಕ್ಕೆ ಕೆಲವೊಂದು ಆಕ್ಷೇಪಗಳು ಹಾಗೂ ಸಮರ್ಥನೆಗಳು ಸಾರ್ವಜನಿಕ‌ ವಲಯದಲ್ಲಿ ಕೇಳಿಬರುತ್ತಿವೆ…

ವಿರೋಧ

* ನಿಷ್ಠಾವಂತರಿಗೆ ಈ ಸರ್ಕಾರದಲ್ಲಿ ಕಾಲ ಬರುವುದು ಕಷ್ಟ. ಈ ಸರ್ಕಾರಕ್ಕೆ ತಕ್ಕಂತೆ, ಅವರು ಹೇಳಿದ ಹಾಗೆ ಕೇಳಿಕೊಂಡು, ಇವರಿಗೆ ಮಾಡುವ ಭ್ರಷ್ಟಾಚಾರಗಳಿಗೆ ಬೆಂಬಲಕ್ಕೆ ನಿಂತುಕೊಂಡರೆ ಆಗ ಇಂತಹ ಇಂದು ಅಧಿಕಾರಿಗಳಿಗೆ ಬೆಂಬಲ ಕೊಡುವುದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳಲಾಗಿದೆ…

* ಉಸ್ತುವಾರಿ ಮಂತ್ರಿಗಳ ಪಿಎ ಅವರ ಅನುಕೂಲಕ್ಕಾಗಿ ಅವರ ಸಂಬಂಧಿಕರನ್ನೇ ಜಿಲ್ಲಾಧಿಕಾರಿಗಳಾಗಿ ಮಾಡಿಸಿಕೊಂಡಿದ್ದಾರೆ, ಇದು ರಾಜಕೀಯ ಪ್ರೇರಿತ ವರ್ಗಾವಣೆ ಮಾನ್ಯ ಬಸವರಾಜ್ ರವರು ಬಡವರ ಪರ ನ್ಯಾಯ ನೀತಿ ಅಕ್ರಮ ಗಣಿಗಾರಿಕೆಯನ್ನು ತಡೆಯಲು ಮುನ್ನೆಚ್ಚರಿಕೆ ಕೈಗೊಂಡ ನಿಷ್ಠಾವಂತ ಅಧಿಕಾರಿ, ಅಕ್ರಮ ಗಣಿಗಾರಿಕೆಗೆ ಸಪೋರ್ಟ್ ಮಾಡಲಿಲ್ಲವೆಂದು ಮಾನ್ಯ ಸರ್ಕಾರ ನೀಡಿದ ಗ್ಯಾರಂಟಿ ಯೋಜನೆಯಲ್ಲಿ ಇದು ಒಂದು ಎಂದು ಕಿಡಿಕಾರಿದ್ದಾರೆ..

* ಬಸವರಾಜ್ ಸಾರ್. ಮೊನ್ನೇ ಮೋನ್ನೇ ಬಂದಿದ್ದು. ಈಸ್ಟ್ ಬೇಗ ವರ್ಗಾ ವಾಗಿದೆ. ಕಾರಣ ಕೋಡಿ… ಎಂದು ಪ್ರಶ್ನೆ ಮಾಡಲಾಗಿದೆ..

* ತನ್ನ ಅಧೀನದಲ್ಲಿ ಇರುವ ಅಧಿಕಾರಿಗಳನ್ನು ತನ್ನ ಆತೋಟಿಯಲ್ಲಿ ಇಟ್ಟು ಭ್ರಷ್ಟಾಚಾರ ಕಡಿವಾಣ ಹಾಕದೆ ಕಂಡು ಕಾಣದ ಹಾಗೆ ಇರುವ ಅಧಿಕಾರಿ ನಿಷ್ಠಾವಂತರ  ಯಾಕೆ ಬೇರೆ ಯಾರೂ ಅದರಲ್ಲೂ ಒಬ್ಬ ಹೆಣ್ಣು ಮಗಳು ಜಿಲ್ಲಾಧಿಕಾರಿ ಆಗಿದ್ದು ಸರಿ ಅನಿಸುತ್ತಿಲ್ಲವಾ ಎಂದು ಪ್ರಶ್ನಿಸಲಾಗಿದೆ…

* ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಶ್ರೀ ಎ.ಬಿ. ಬಸವರಾಜು ಅವರ ವರ್ಗಾವಣೆ ಜಿಲ್ಲೆಯ ಜನತೆಗೆ ನಿಜಕ್ಕೂ ಬೇಸರದ ಸಂಗತಿ.

ಅವರು ಕೇವಲ ಅಧಿಕಾರಿಯಾಗಿ ಮಾತ್ರವಲ್ಲ, ಜನರ ನಡುವೆ ಬೆರೆತು ಕೆಲಸ ಮಾಡಿದ ಒಬ್ಬ ಜನಪರ ಆಡಳಿತಗಾರರಾಗಿದ್ದರು. ಸಾಮಾನ್ಯ ಜನರ ಅಹವಾಲುಗಳನ್ನು ಶ್ರದ್ಧೆಯಿಂದ ಆಲಿಸಿ, ಸರಳತೆ ಮತ್ತು ದೃಢತೆಯೊಂದಿಗೆ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದವರು.

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯ ಜಾನುವಾರು ಜಾತ್ರೆಗೆ ವಿಶೇಷ ಕಾಳಜಿ ವಹಿಸಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ದೂರದೃಷ್ಟಿಯ ನೀಲನಕ್ಷೆ ರೂಪಿಸಿದರು. ಸುಂಕ ರಹಿತ ಜಾತ್ರೆಯನ್ನು ಜಾರಿಗೊಳಿಸಿ, ರೈತರಿಗೆ ನೇರವಾಗಿ ಅನುಕೂಲವಾಗುವಂತೆ ಕ್ರಮ ಕೈಗೊಂಡದ್ದು ಅವರ ಜನಪರ ಮನೋಭಾವದ ಪ್ರತಿಬಿಂಬವಾಗಿದೆ.

ಸರ್ಕಾರಿ ಭೂಮಿಯನ್ನು ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡು ಭೂಗಳ್ಳರಿಗೆ ಸಿಂಹಸ್ವಪ್ನರಾಗಿದ್ದರು. “ಸರ್ಕಾರಿ ಶಾಲೆ ಉಳಿಸಿ – ಕನ್ನಡ ಬೆಳೆಸಿ” ಎಂಬ ಧ್ಯೇಯದೊಂದಿಗೆ ಶಿಕ್ಷಣ ಕ್ಷೇತ್ರಕ್ಕೂ ಹೊಸ ಚೈತನ್ಯ ತುಂಬಿದರು. ತೂಬಗೆರೆ ಹಲಸಿಗೆ ಬ್ರಾಂಡ್ ಪೇಟೆಂಟ್ ಪಡೆಯುವ ಪ್ರಯತ್ನಗಳ ಮೂಲಕ ಸ್ಥಳೀಯ ಉತ್ಪನ್ನಕ್ಕೆ ಗುರುತಿನ ಮುದ್ರೆ ಒದಗಿಸಲು ಮುಂದಾದರು.

ಯುವಕರೊಂದಿಗೆ ಚಾರಣ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಆಡಳಿತ ಮತ್ತು ಯುವಶಕ್ತಿಯ ನಡುವೆ ಸೇತುವೆ ನಿರ್ಮಿಸಿದ ಅಧಿಕಾರಿಯಾಗಿದ್ದರು.

ಇಂತಹ ಪ್ರಾಮಾಣಿಕ, ದಕ್ಷ ಮತ್ತು ಹೃದಯವಂತ ಅಧಿಕಾರಿಯನ್ನು ಪಡೆದ ನಾವು ಭಾಗ್ಯವಂತರು. ಅವರು ಇನ್ನೂ ಹೆಚ್ಚಿನ ಕಾಲ ನಮ್ಮ ಜಿಲ್ಲೆಯಲ್ಲೇ ಸೇವೆ ಸಲ್ಲಿಸಬೇಕೆಂಬುದು ಜನಮನದ ಆಶೆಯಾಗಿತ್ತು ಎಂದು ಸಾರ್ವಜನಿಕರು ಹೇಳಿದ್ದಾರೆ…

Ramesh Babu

Journalist

Recent Posts

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

4 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

9 hours ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

16 hours ago

ಕುಟುಂಬಗಳ ಆಕ್ರಂದನ ಮುಗಿಲು ಮುಟ್ಟಿಸಿದ ಶನಿವಾರ: ಜಿಲ್ಲೆಯನ್ನ ಬೆಚ್ಚಿಬೀಳಿಸಿದ ಸರಣಿ ದುರಂತಗಳು: ಒಂದೇ ದಿನ 7 ಮಂದಿ ಮೃತ್ಯು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…

1 day ago

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳ ದಾರುಣ ಸಾವು

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ‌…

1 day ago

ಕೆಲಸದ ಕನಸು ಹೊತ್ತು ಹೊರಟ ಯುವತಿ ಲಾರಿ ಅಪಘಾತಕ್ಕೆ ಬಲಿ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…

1 day ago