ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.
2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.
ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಬ್ ಇನ್ಸ್ಪೆಕ್ಟರ್ ಡ್ರೆಸ್ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…