ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.
2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.
ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…