ಕರ್ನಾಟಕ ರಾಜ್ಯ ಉಪ ಲೋಕಾಯುಕ್ತರಾದ ಗೌರವಾನ್ವಿತ ಕೆ.ಎನ್. ಫಣೀಂದ್ರ ಅವರು 2023 ರ ಆಗಸ್ಟ್ 05 ರಿಂದ 08 ರ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸುವುದು, ದೂರು/ಅರ್ಜಿಗಳನ್ನು ಸ್ವೀಕರಿಸುವುದು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಬಾಕಿ ಇರುವ ದೂರುಗಳ ವಿಚಾರಣೆ ಮತ್ತು ವಿಲೇವಾರಿ ಮಾಡಲಿದ್ದಾರೆ.
2023 ರ ಆಗಸ್ಟ್ 05 (ಶನಿವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 01:30 ಗಂಟೆಯವರೆಗೆ ವರೆಗೆ ಮತ್ತು ಮಧ್ಯಾಹ್ನ 2:30 ಗಂಟೆಯಿಂದ ರಿಂದ 5:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ವಿಚಾರಣೆ ನಡೆಸಲಿದ್ದಾರೆ. ನಂತರ ಸಂಜೆ 5:30 ಗಂಟೆಯಿಂದ 6:30 ಗಂಟೆಯವರೆಗೆ ಕರ್ನಾಟಕ ರಾಜ್ಯ ಮಟ್ಟದ ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಕರ್ನಾಟಕ ಸಾಕ್ಷರತೆ ಯೋಜನೆಯ ಕುರಿತು ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ.
ಆಗಸ್ಟ್ 6 (ಭಾನುವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 1:00 ಗಂಟೆಯ ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಂಗ ಅಧಿಕಾರಿಗಳ ಜೊತೆ ಸಾರ್ವಜನಿಕ ಆಡಳಿತದಲ್ಲಿ ಲೋಕಾಯುಕ್ತ ಸಂಸ್ಥೆ ಮತ್ತು ಕಾನೂನು ಪ್ರಾಧಿಕಾರದ ಪಾತ್ರ ಕುರಿತ ಸಭೆಯನ್ನು ಸಿಟಿ ಸಿವಿಲ್ ಕೋರ್ಟ್ ನ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:15 ಗಂಟೆಯಿಂದ 12:30 ಗಂಟೆಯವರೆಗೆ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ಜೊತೆ ಕರ್ನಾಟಕ ಲೋಕಾಯುಕ್ತ ಕಚೇರಿಯ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ. ಸಂಜೆ 4:00 ಗಂಟೆಗೆ ಜಿಲ್ಲೆಯ ತಾಲ್ಲೂಕುಗಳಿಗೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 7 (ಸೋಮವಾರ) ರಂದು ಬೆಳಗ್ಗೆ 10:00 ಗಂಟೆಯಿಂದ 11:00 ಗಂಟೆಯವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಡಳಿತ ಭವನದಲ್ಲಿ ಸಭೆ ನಡೆಸಲಿದ್ದಾರೆ. ಬೆಳಗ್ಗೆ 11:00 ಗಂಟೆಯಿಂದ 1:30 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2:30 ಗಂಟೆಯಿಂದ 4:30 ಗಂಟೆಯವರೆಗೆ ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ ಅಥವಾ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ನಡೆಸಲಾಗುತ್ತದೆ.
ಆಗಸ್ಟ್ 7 ರ ಬಾಕಿ ಪ್ರಕರಣಗಳನ್ನು ಆಗಸ್ಟ್ 8 ರಂದು ಬೆಳಗ್ಗೆ 10:00 ಗಂಟೆಯಿಂದ ಪ್ರಕರಣಗಳು ಮುಕ್ತಾಯ ಆಗುವವರೆಗೂ ನಡೆಸಲಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…