2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…