2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…