2022-23 ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯು ರಾಜ್ಯದ ಅತ್ಯುತ್ತಮ ಜಿಲ್ಲಾ ಪಂಚಯತಿ ಪ್ರಶಸ್ತಿ ಸೇರಿ ಒಟ್ಟು ಆರು ಪ್ರಶಸ್ತಿಗಳಿಗೆ ಭಾಜನವಾಗಿದೆ.
ಮಾರ್ಚ್ 24ರಂದು ಬೆಂಗಳೂರಿನಲ್ಲಿ ನಡೆಯುವ ಗಾಂಧಿ ಗ್ರಾಮ ಪುರಸ್ಕಾರ ಹಾಗೂ ನರೇಗಾ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳ ಪ್ರದಾನವಾಗಲಿದೆ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರವಿ.ಎಂ.ತಿರ್ಲಾಪುರ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬೆಂಗಳೂರು ಜಿಲ್ಲಾ ಪಂಚಾಯತಿಯು ಅತ್ಯುತ್ತಮ ಜಿಪಂ ಪ್ರಶಸ್ತಿ ಹಾಗೂ 15 ಲಕ್ಷ ನಗದು ಪುರಸ್ಕಾರ, ದೊಡ್ಡಬಳ್ಳಾಪುರ ತಾ.ಪಂ ಅತ್ಯುತ್ತಮ ತಾ.ಪಂ ಪ್ರಶಸ್ತಿ ಹಾಗೂ 10 ಲಕ್ಷ ಪುರಸ್ಕಾರ, ತೂಬಗೆರೆ ಗ್ರಾಮ ಪಂಚಾಯತಿಯು ಅತ್ಯುತ್ತಮ ಗ್ರಾ.ಪಂ ಪ್ರಶಸ್ತಿ ಹಾಗೂ 5 ಲಕ್ಷ ನಗದು ಪುರಸ್ಕಾರಕ್ಕೆ ಆಯ್ಕೆಯಾಗಿವೆ.
ಜೊತೆಗೆ ಅತ್ಯುತ್ತಮ ಆಡಳಿತ ವಿಭಾಗದಲ್ಲಿ ಬೆಂಗಳೂರು ಜಿ.ಪಂ, ಅತ್ಯುತ್ತಮ ತಾಲೂಕು ಮಟ್ಟದ ರೇಷ್ಮೆ ಇಲಾಖೆ ವಿಭಾಗದಲ್ಲಿ ದೇವನಹಳ್ಳಿ ರೇಷ್ಮೆ ಇಲಾಖೆ ಹಾಗೂ ಜಲ ಸಂಜೀವಿನಿ ಪಂಚಾಯತಿ ವಿಭಾಗದಲ್ಲಿ ಸಾಸಲು ಗ್ರಾ.ಪಂ ಪ್ರಶಸ್ತಿ ಪಡೆದಿವೆ.
ಪ್ರಶಸ್ತಿಗೆ ನಿಗದಿಪಡಿಸಲಾದ ಮಾನದಂಡಗಳಿಗೆ ಅನುಗುಣವಾಗಿ ಜಿಲ್ಲಾ ಪಂಚಾಯತಿಗಳು ಸಲ್ಲಿಸಿದ ಪುಸ್ತಾವನೆಗಳನ್ನು ರಾಜ್ಯ ಮಟ್ಟದ ಆಯ್ಕೆ ಸಮಿತಿಯು ಮೌಲ್ಯಮಾಪನ ಮಾಡಿ ವಿವಿಧ ಪ್ರಶಸ್ತಿಗಳಿಗೆ ಆಯ್ಕೆ ಮಾಡಿದೆ.
ಜಿಲ್ಲೆಯು ನರೇಗಾ ಯೋಜನೆಯಡಿ ಉತ್ತಮ ಪ್ರಗತಿ ಸಾಧಿಸಲು ಶ್ರಮಿಸಿದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಈ ಪ್ರಶಸ್ತಿಯು ಹೊಸ ಸಂತಸ, ಉತ್ಸಾಹ ಮೂಡಿದೆ ಎಂದು ಸಾಧನೆಗೆ ಕಾರಣವಾದ ತಂಡಕ್ಕೆ ಅಭಿನಂದನೆಗಳನ್ನು ತಿಳಿಸಿದ ಉಪ ಕಾರ್ಯದರ್ಶಿ ಜಿ.ಪಂ ಹಾಗೂ ನರೇಗಾ ನೋಡಲ್ ಅಧಿಕಾರಿ ಡಾ.ನಾಗರಾಜ
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…